ಮಂಡ್ಯ

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ​

ಕೆ.ಆರ್.ಎಸ್ ಗ್ರಾಮದ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಅತ್ಯಂತ ಆಘಾತಕಾರಿ ವಿಷಯವೆಂದರೆ ಸ್ಥಳೀಯ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಈ ಕೃತ್ಯ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಬಂಡೀಹೊಳೆ ಗ್ರಾಮದ ನಿವಾಸಿ ರಾಕೇಶ್ (28) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ರಾತ್ರಿ ವೇಳೆ ಬಸ್ ನಿಲ್ದಾಣದ ಬಳಿ ಬಂದಿದ್ದ ರಾಕೇಶ್‌ನನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು, ಆತನ ತಲೆಯ ಮೇಲೆ ಭಾರೀ ಗಾತ್ರದ ಕಲ್ಲು ಎತ್ತಿ ಹಾಕಿ ಕ್ರೂರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಯಾದ ಸ್ಥಳದಲ್ಲೇ ಮೃತ ರಾಕೇಶ್‌ಗೆ ಸೇರಿದ ಬೈಕ್ ಪತ್ತೆಯಾಗಿದೆ. ​ವಿಷಯ ತಿಳಿಯುತ್ತಿದ್ದಂತೆ ಕೆ.ಆರ್.ಎಸ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆಯಾದ ಯುವಕನ ಹಿನ್ನೆಲೆ ಹಾಗೂ ಕೊಲೆಗೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ​ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ಈ ಭೀಕರ ಕೊಲೆ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಹಾಗೂ ಭಯದ ವಾತಾವರಣ ಮೂಡಿಸಿದೆ. ಸದ್ಯ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

6 mins ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

6 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

6 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

6 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

6 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

6 hours ago