ನಾಗಮಂಗಲ: ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದು ಚಾಕು ತೋರಿಸಿ ಎದುರಿಸಿದ ವ್ಯಕ್ತಿಗೆ ಕಂಬಕ್ಕೆ ಕಟ್ಟು ಹಾಕಿ ಊರ ಜನರು ಗೂಸ ನೀಡಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಜಿ. ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಸಂಜೆ ನಾಗೇಶ್ ಮತ್ತು ಅದೇ ಗ್ರಾಮದ ಚಲುವೇಶ್ ಎಂಬುವವರ ನಡುವೆ ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದಿದೆ. ಈ ಸಂದರ್ಭದಲ್ಲಿ ನಾಗೇಶ್ ಚಾಕು ತೋರಿದ ಎಂಬ ಒಂದೇ ಕಾರಣಕ್ಕಾಗಿ ಆತನನ್ನು ಕಂಬಕ್ಕೆ ಕಟ್ಟಿ ಕೆಲವರು ಥಳಿಸಿದ್ದಾರೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದವರ ವಿರುದ್ದ ದೂರು ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಆರೋಪಿಗಳ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…