ನಾಗಮಂಗಲ: ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದು ಚಾಕು ತೋರಿಸಿ ಎದುರಿಸಿದ ವ್ಯಕ್ತಿಗೆ ಕಂಬಕ್ಕೆ ಕಟ್ಟು ಹಾಕಿ ಊರ ಜನರು ಗೂಸ ನೀಡಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಜಿ. ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಸಂಜೆ ನಾಗೇಶ್ ಮತ್ತು ಅದೇ ಗ್ರಾಮದ ಚಲುವೇಶ್ ಎಂಬುವವರ ನಡುವೆ ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದಿದೆ. ಈ ಸಂದರ್ಭದಲ್ಲಿ ನಾಗೇಶ್ ಚಾಕು ತೋರಿದ ಎಂಬ ಒಂದೇ ಕಾರಣಕ್ಕಾಗಿ ಆತನನ್ನು ಕಂಬಕ್ಕೆ ಕಟ್ಟಿ ಕೆಲವರು ಥಳಿಸಿದ್ದಾರೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದವರ ವಿರುದ್ದ ದೂರು ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಆರೋಪಿಗಳ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…