ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ದೇವತೆ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಯಾಗಿರುವ ಅಹಲ್ಯಾದೇವಿಯ ದರ್ಶನ ಪಡೆದು ಕುಟುಂಬ ಸಮೇತ ನಟ ದರ್ಶನ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಆರತಿ ಉಕ್ಕಡ ಕ್ಷೇತ್ರಕ್ಕೆ ಇಂದು(ಜನವರಿ.15) ಭೇಟಿ ನೀಡಿದ ನಟ ದರ್ಶನ್, ಸಂಕಷ್ಟ ನಿವಾರಣೆಗಾಗಿ ಶಕ್ತಿ ದೇವತೆ ಅಹಲ್ಯಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ದೃಷ್ಟಿ ದೋಷ ಹಾಗೂ ಸಂಕಷ್ಟ ನಿವಾರಣೆಗಾಗಿ ಪ್ರಾರ್ಥನೆ ಮಾಡಿದ್ದಾರೆ.
ಇನ್ನೂ ನಟ ದರ್ಶನ್ ಅವರಿಗೆ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್, ಅಳಿಯ ಚಂದನ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ನಟ ಧನ್ವೀರ್ ಸಾಥ್ ನೀಡಿದ್ದಾರೆ.
ನಟ ದರ್ಶನ್ ನಿನ್ನೆ ಮೈಸೂರಿನ ತಮ್ಮ ಫಾರ್ಮ್ಹೌಸ್ನಲ್ಲಿ ಸಂಕ್ರಾತಿ ಹಬ್ಬ ಆಚರಿಸಿದರು. ಇದರ ಬೆನ್ನಲ್ಲೇ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ಬೆನ್ನು ನೋವಿನ ಬಗ್ಗೆ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಮಂಡ್ಯದ ಆರತಿ ಉಕ್ಕಡ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…