ಮಂಡ್ಯ

ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಸ್ಥ್ಯ ಆರೋಗ್ಯ ಕಾರ್ಯಕ್ರಮವನ್ನು ಚುರುಕುಗೊಳಿಸಿ : ಶೇಖ್ ತನ್ವೀರ್ ಆಸಿಫ್

ಮಂಡ್ಯ:  ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಸ್ಥ್ಯ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಿ  ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು  ಅಧಿಕಾರಿಗಳಿಗೆ ತಿಳಿಸಿದರು.

ಅವರು ಗುರುವಾರ(ಜೂ.28) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಷ್ಟ್ರೀಯ ಬಾಲ ಸ್ವಸ್ಥ್ಯ ಕಾರ್ಯಕ್ರಮವು ಅಂಗನವಾಡಿಗಳಲ್ಲಿ 6 ವರ್ಷದೊಳಗಿನ ಹಾಗೂ ಸರ್ಕಾರಿ/ ಅನುದಾನಿತ/ ಸರ್ಕಾರಿ ವಸತಿ ಶಾಲೆಗಳಲ್ಲಿ ವಿದ್ಯಭ್ಯಾಸ ಮಾಡುತ್ತಿರುವ 1 ರಿಂದ 12 ನೇ ತರಗತಿವರಗಿನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಿ ಆರೋಗ್ಯದಲ್ಲಿ ಯಾವುದೇ ತೊಂದರೆಯಿದ್ದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದರು.

ಕೆಲವು ಕಾಯಿಲೆಗಳು ಮಕ್ಕಳಿಗೆ ಹುಟ್ಟಿನಿಂದ ಬರುತ್ತದೆ. ಕೆಲವು ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. ಇವುಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಮಕ್ಕಳು ಗುಣಮುಖರಾಗುತ್ತಾರೆ. ವಿದ್ಯಾರ್ಥಿಗಳನ್ನು ವರ್ಷಕ್ಕೆ ಎರಡು ಬಾರಿ ಚಿಕಿತ್ಸೆಗೆ ಒಳಪಡಿಸುವುದರಿಂದ  ಮಕ್ಕಳ ಬೆಳವಣಿಗೆಯಲ್ಲಿ ಯಾವುದೇ ತೊಂದರೆ ಇದ್ದಲ್ಲಿ ತಕ್ಷಣ ವರದಿ ಮಾಡಿ ಚಿಕಿತ್ಸೆ ಕೊಡಿಸಿ ಎಂದರು.

ಸಭೆಯಲ್ಲಿ ಡಿಸೆಂಬರ್ 2023 ರಿಂದ ಏಪ್ರಿಲ್ 2024 ರವರೆಗೆ ಹೆರಿಗೆ ಸಂದರ್ಭದಲ್ಲಿ ಮೃತವಾದ ನವಜಾತ ಶಿಶುಗಳ ಕಾರಣ ಕುರಿತು ಪೋಷಕರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ,ಆರ್.ಸಿ.ಹೆಚ್.ಒ ಡಾ: ಅನಿಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago