Mysore
22
overcast clouds

Social Media

ಮಂಗಳವಾರ, 14 ಜುಲೈ 2026
Light
Dark

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಸಂಪೂರ್ಣವಾಗಿ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತವು ಮುಂದಿನ ಆದೇಶದವರೆಗೆ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ.

ಸ್ಥಳದಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಯಾರೂ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

 

Tags:
error: Content is protected !!