ಮಂಡ್ಯ : ಕುಟುಂಬಕ್ಕೆ ಆಧಾರವಾಗಿದ್ದ ಮಗ ಅಪಘಾತದಲ್ಲಿ ಮೃತಪಟ್ಟಿದ್ದ. ಮಗನನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬ ದಿಕ್ಕು ತೋಚದೆ ಕಂಗಾಲಾಗಿತ್ತು. ಇಂತಹ ಸಂಕಷ್ಟದಲ್ಲಿ ಮೃತ ಯುವಕನ ಕುಟುಂಬದ ನೆರವಿಗೆ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಬಂದಿದೆ.
ಮೃತ ಯುವಕ ಇಂಡಿಯನ್ ಓವರ್ಸೀಸ್ ಬ್ಯಾಂಕ್ನಲ್ಲಿ 750 ರೂ. ಅಪಘಾತ ವಿಮೆ ಕಟ್ಟಿದ್ದ. ಈಗ ಬ್ಯಾಂಕ್ ಮೃತ ಯುವಕನ ಕುಟುಂಬಕ್ಕೆ 20 ಲಕ್ಷ ರೂ.ಗಳ ಪರಿಹಾರ ನೀಡಿದೆ. ಈ ವಿಮೆ ಯೋಜನೆಯಡಿ ಇಷ್ಟು ದೊಡ್ಡ ಮೊತ್ತದ ಪರಿಹಾರ ನೀಡಿರುವುದು ದೇಶದಲ್ಲಿಯೇ ಮೊದಲ ಪ್ರಕರಣ ಎಂದು ಬ್ಯಾಂಕ್ನ ಅಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದ ಮಾಚಲಪ್ಪ ಮತ್ತು ಮಹದೇವಮ್ಮ ಎಂಬುವರ ಮಗ ಅವಿನಾಶ್ (30) ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ದುಡಿಯುತ್ತಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ನಡುವೆ ಅಪಘಾತ ವಿಮೆ ನೆರವಿಗೆ ಬಂದಿದ್ದು, ಪರಿಹಾರದ ಹಣ ಕುಟುಂಬದ ಕೈ ಸೇರಿದೆ.
ಅವಿನಾಶ್ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಕೀಲಾರ ಶಾಖೆಯಲ್ಲಿ ಅಪಘಾತ ವಿಮೆ ಕಟ್ಟಿದ್ದರು. ಅದರಂತೆ ವಾರ್ಷಿಕ 750 ರೂ. ಮೊದಲ ಕಂತನ್ನು ಪಾವತಿಸಿದ್ದರು. ಈ ಹಿನ್ನೆಲೆಯಲ್ಲಿ ವಿಮೆ ಯೋಜನೆಯಂತೆ ನೊಂದ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.
ಕೀಲಾರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಮೈಸೂರು ಡಿವಿಷನ್ ಮ್ಯಾನೇಜರ್ ವಿಕಾಶ್ವರ್ಮಾ, ಅಧಿಕಾರಿ ಮೀನಾಕ್ಷಿ, ಕೀಲಾರ ಶಾಖೆಯ ವ್ಯವಸ್ಥಾಪಕ ನಿರ್ದೇಶಕ ಜಯಕೃಷ್ಣ, ಸಹಾಯಕ ವ್ಯವಸ್ಥಾಪಕ ಮಹಾವೀರ್ಸಿಂಗ್ ಅವರು ಮೃತ ಅವಿನಾಶ್ ತಾಯಿ ಮಹದೇವಮ್ಮ ಅವರಿಗೆ 20 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಣೆ ಮಾಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…