ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ.
ಶನಿವಾರ(ಮೇ.25) ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ಯುವಕರು ಬೆಂಕಿಯ ಜ್ವಾಲೆ ನೋಡಿದ ತಕ್ಷಣ ಮಾಲೀಕರಿಗೆ ಕರೆ ಮಾಡಿದ್ದಾರೆ. ಆಲೆಮನೆ ಮಾಲೀಕ ಸ್ಥಳಕ್ಕೆ ಬರುವಷ್ಟರಲ್ಲಿ ೩ ಮೋಟರ್, ಬೈಲರ್, ವಿದ್ಯತ್ ಸಂಪರ್ಕ ಕಲ್ಪಿಸುವ ಉಪಕರಣ, ಆಲೆಮನೆಯ ಮೇಲ್ಚಾವಣೆ ಸುಟ್ಟು ಭಸ್ಮವಾಗಿವೆ.
ಸು.೪ ಲಕ್ಷ ಬೆಲೆಬಾಳುವ ವಸ್ತುಗಳು ಬೆಂಕಿಗೆ ಸುಟ್ಟು ಹೋಗಿವೆ. ಸಾಲ ಮಾಡಿ ಬದುಕು ರೂಪಿಸಿಕೊಂಡಿದ್ದ ನನಗೆ ದಿಕ್ಕು ತೋಚದಂತಾಗಿದೆ ಎಂದು ಆಲೆಮನೆ ಮಾಲೀಕ ಕೆ.ಟಿ ರವೀಂದ್ರ ಅಳಲು ತೋಡಿಕೊಂಡಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಸುದ್ದಿ ತಿಳಿದ ಚೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…