Flame border background, black realistic fire image
ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ.
ಶನಿವಾರ(ಮೇ.25) ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ಯುವಕರು ಬೆಂಕಿಯ ಜ್ವಾಲೆ ನೋಡಿದ ತಕ್ಷಣ ಮಾಲೀಕರಿಗೆ ಕರೆ ಮಾಡಿದ್ದಾರೆ. ಆಲೆಮನೆ ಮಾಲೀಕ ಸ್ಥಳಕ್ಕೆ ಬರುವಷ್ಟರಲ್ಲಿ ೩ ಮೋಟರ್, ಬೈಲರ್, ವಿದ್ಯತ್ ಸಂಪರ್ಕ ಕಲ್ಪಿಸುವ ಉಪಕರಣ, ಆಲೆಮನೆಯ ಮೇಲ್ಚಾವಣೆ ಸುಟ್ಟು ಭಸ್ಮವಾಗಿವೆ.
ಸು.೪ ಲಕ್ಷ ಬೆಲೆಬಾಳುವ ವಸ್ತುಗಳು ಬೆಂಕಿಗೆ ಸುಟ್ಟು ಹೋಗಿವೆ. ಸಾಲ ಮಾಡಿ ಬದುಕು ರೂಪಿಸಿಕೊಂಡಿದ್ದ ನನಗೆ ದಿಕ್ಕು ತೋಚದಂತಾಗಿದೆ ಎಂದು ಆಲೆಮನೆ ಮಾಲೀಕ ಕೆ.ಟಿ ರವೀಂದ್ರ ಅಳಲು ತೋಡಿಕೊಂಡಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಸುದ್ದಿ ತಿಳಿದ ಚೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…