Flame border background, black realistic fire image
ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ.
ಶನಿವಾರ(ಮೇ.25) ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ಯುವಕರು ಬೆಂಕಿಯ ಜ್ವಾಲೆ ನೋಡಿದ ತಕ್ಷಣ ಮಾಲೀಕರಿಗೆ ಕರೆ ಮಾಡಿದ್ದಾರೆ. ಆಲೆಮನೆ ಮಾಲೀಕ ಸ್ಥಳಕ್ಕೆ ಬರುವಷ್ಟರಲ್ಲಿ ೩ ಮೋಟರ್, ಬೈಲರ್, ವಿದ್ಯತ್ ಸಂಪರ್ಕ ಕಲ್ಪಿಸುವ ಉಪಕರಣ, ಆಲೆಮನೆಯ ಮೇಲ್ಚಾವಣೆ ಸುಟ್ಟು ಭಸ್ಮವಾಗಿವೆ.
ಸು.೪ ಲಕ್ಷ ಬೆಲೆಬಾಳುವ ವಸ್ತುಗಳು ಬೆಂಕಿಗೆ ಸುಟ್ಟು ಹೋಗಿವೆ. ಸಾಲ ಮಾಡಿ ಬದುಕು ರೂಪಿಸಿಕೊಂಡಿದ್ದ ನನಗೆ ದಿಕ್ಕು ತೋಚದಂತಾಗಿದೆ ಎಂದು ಆಲೆಮನೆ ಮಾಲೀಕ ಕೆ.ಟಿ ರವೀಂದ್ರ ಅಳಲು ತೋಡಿಕೊಂಡಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಸುದ್ದಿ ತಿಳಿದ ಚೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…