ಮಂಡ್ಯ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ.

ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ ಸಂಜೆ 5 ಗಂಟೆಗೆ ಸುಮಾರಿಗೆ ವಾಪಸ್ ಶ್ರೀರಂಗಪಟ್ಟಣಕ್ಕೆ ಬರುತ್ತಿದ್ದಾಗ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ಕಾರಿನ ಚಾಲಕ ಕಿರಣ್ ಅವರು ತಕ್ಷಣ ಕಾರಿನಿಂದ ಇಳಿದು ರಂಜಿತಾ ಅವರನ್ನು ಕಾರಿನಿಂದ ಕೆಳಗಿಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಸಂಚಾರ ಪಿಎಸ್‌ಐ ರಂಗಸ್ವಾಮಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡರಲ್ಲದೆ, ವಾಹನ ತೆರವಿಗೆ ಕ್ರಮವಹಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

4 mins ago

ಸಂಕ್ರಾಂತಿ ವಿಶೇಷ : ಮೈಸೂರು – ಟ್ಯುಟಿಕಾರನ್‌ ನಡುವೆ ವಿಶೇಷ ರೈಲು

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…

17 mins ago

ಸಂಶೋಧನೆಗೆ ಸಿಗದ ಪ್ರಾಮುಖ್ಯತೆ : ವಿಶ್ರಾಂತ ಕುಲಪತಿ ರಂಗಪ್ಪ ಬೇಸರ

ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…

35 mins ago

ಆಹಾರದ ಮಹತ್ವ ಕುರಿತು ಅರಿವು ಅಗತ್ಯ : ಕೃಷಿ ಸಚಿವ.ಚಲುವರಾಯಸ್ವಾಮಿ

ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…

1 hour ago

ದೇಸಿ ಎಣ್ಣೆ ಮೇಳಕ್ಕೆ ವಿದ್ಯುಕ್ತ ಚಾಲನೆ ; ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಮೈಸೂರು : ಸಹಜ ಸಮೃದ್ಧ ಸಂಸ್ಥೆ ಹಾಗೂ ದೇಸಿರಿ ನ್ಯಾಚುರಲ್ಸ್ ಸಹಯೋಗದಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿರುವ ಮೂರು ದಿನಗಳ…

1 hour ago

ಐತಿಹಾಸಿಕ ಕ್ಷಣ | ಆಸ್ಕರ್‌ ರೇಸ್‌ನಲ್ಲಿ ಕಾಂತಾರ ಚಾಪ್ಟರ್‌-1

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಚಿತ್ರವು…

2 hours ago