ಮಂಡ್ಯ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ.

ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ ಸಂಜೆ 5 ಗಂಟೆಗೆ ಸುಮಾರಿಗೆ ವಾಪಸ್ ಶ್ರೀರಂಗಪಟ್ಟಣಕ್ಕೆ ಬರುತ್ತಿದ್ದಾಗ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ಕಾರಿನ ಚಾಲಕ ಕಿರಣ್ ಅವರು ತಕ್ಷಣ ಕಾರಿನಿಂದ ಇಳಿದು ರಂಜಿತಾ ಅವರನ್ನು ಕಾರಿನಿಂದ ಕೆಳಗಿಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಸಂಚಾರ ಪಿಎಸ್‌ಐ ರಂಗಸ್ವಾಮಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡರಲ್ಲದೆ, ವಾಹನ ತೆರವಿಗೆ ಕ್ರಮವಹಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

2 hours ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

2 hours ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

2 hours ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

2 hours ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

12 hours ago