Mysore
20
scattered clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

ಮಂಡ್ಯ| ಮತಾಂತರ ಆರೋಪ: ಪತ್ನಿ ಹಾಗೂ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್‌ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಮಹಿಳೆಯ ಸಹೋದರ ರವಿಕಿರಣ್‌ ನೀಡಿದ ದೂರಿನ ಮೇಲೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

15 ವರ್ಷಗಳ ಹಿಂದೆ ವಿವಾಹವಾಗಿದ್ದ ಲಕ್ಷ್ಮೀ ಹಾಗೂ ಶ್ರೀಕಾಂತ್‌, ಆರಂಭದಲ್ಲಿ ಚೆನ್ನಾಗಿಯೇ ಇದ್ದರು.

ವರ್ಷ ಕಳೆದಂತೆ ಪತಿಯ ಕುಟುಂಬಸ್ಥರು ಅನ್ಯ ಧರ್ಮಕ್ಕೆ ಮತಾಂತರವಾಗಿದ್ದರು. ಆದರೆ ಲಕ್ಷ್ಮೀ ಮತಾಂತರಕ್ಕೆ ಒಪ್ಪಲಿಲ್ಲ. ಅಂದಿನಿಂದ ಲಕ್ಷ್ಮೀಗೆ ಕಿರುಕುಳ ನೀಡಲು ಶುರು ಮಾಡಿದ್ದರು ಎನ್ನಲಾಗಿದೆ.

ಪ್ರಕರಣ ಸಂಬಂಧ 9 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ವಿಚಾರ ತಿಳಿದು ಬರಲಿದೆ.

Tags:
error: Content is protected !!