ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಮಹಿಳೆಯ ಸಹೋದರ ರವಿಕಿರಣ್ ನೀಡಿದ ದೂರಿನ ಮೇಲೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
15 ವರ್ಷಗಳ ಹಿಂದೆ ವಿವಾಹವಾಗಿದ್ದ ಲಕ್ಷ್ಮೀ ಹಾಗೂ ಶ್ರೀಕಾಂತ್, ಆರಂಭದಲ್ಲಿ ಚೆನ್ನಾಗಿಯೇ ಇದ್ದರು.
ವರ್ಷ ಕಳೆದಂತೆ ಪತಿಯ ಕುಟುಂಬಸ್ಥರು ಅನ್ಯ ಧರ್ಮಕ್ಕೆ ಮತಾಂತರವಾಗಿದ್ದರು. ಆದರೆ ಲಕ್ಷ್ಮೀ ಮತಾಂತರಕ್ಕೆ ಒಪ್ಪಲಿಲ್ಲ. ಅಂದಿನಿಂದ ಲಕ್ಷ್ಮೀಗೆ ಕಿರುಕುಳ ನೀಡಲು ಶುರು ಮಾಡಿದ್ದರು ಎನ್ನಲಾಗಿದೆ.
ಪ್ರಕರಣ ಸಂಬಂಧ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ವಿಚಾರ ತಿಳಿದು ಬರಲಿದೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…