ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.
ನಾಗಮಂಗಲ ಗ್ರಾಮಾಂತರ ಎಎಸ್ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ.
ಆರೋಪಿ ಕೃಷ್ಣನ ವಿರುದ್ಧ ಆತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರತಿ ದಿನ ಹಣ ನೀಡುವಂತೆ ಕಿರುಕುಳ ನೀಡುತ್ತಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ಹಿನ್ನೆಲೆಯಲ್ಲಿ ಕೃಷ್ಣನನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರಲು ಎಎಸ್ಐ ರಾಜು ಹೊರಟಿದ್ದರು. ಈ ವೇಳೆ ನಾಗಮಂಗಲ ಕೋರ್ಟ್ ಬಳಿ ನಿಂತಿದ್ದ ಕೃಷ್ಣನನ್ನು ಎಎಸ್ಐ ಠಾಣೆಗೆ ಕರೆದಿದ್ದಾರೆ. ಠಾಣೆಗೆ ಬರಲು ಕೃಷ್ಣ ಒಪ್ಪಿಲ್ಲ. ಈ ವೇಳೆ ಕೃಷ್ಣನ ಕಾಲರ್ ಹಿಡಿದು ಬಲವಂತವಾಗಿ ಆಟೋಗೆ ಹತ್ತಿಸಲು ಯತ್ನಿಸಿದ್ದಾರೆ. ಈ ವೇಳೆ ಎಎಸ್ಐ ಅವರನ್ನು ತಳ್ಳಿದ ಕೃಷ್ಣ ಹಲ್ಲೆ ನಡೆಸಿದ್ದಾನೆ.
ಘಟನೆ ನಡೆದ ಬಳಿಕ ಆರೋಪಿ ಕೃಷ್ಣನನ್ನು ಬಂಧಿಸಿದ ಪೊಲೀಸರು ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…