ಮಂಡ್ಯ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ: ಡಾ.ಕುಮಾರ

ಮಂಡ್ಯ:  ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ  ಪ್ರಾಂಶುಪಾಲರಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಪೋಷಕರ ಸಭೆ ಹಾಗೂ ಕೇಂದ್ರ ವಿದ್ಯಾಲಯದ ಕಟ್ಟಡ ಕಾಮಗಾರಿ ಸಭೆ ಕುರಿತು ಮಾತನಾಡಿದರು.

ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಹಾಗೂ ಇರುವ ಶಿಕ್ಷಕರು ಕೆಲಸಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ, ಸಂವಾಹನದಲ್ಲಿ ಭಾಷೆಯ ತೊಂದರೆ ಉಂಟಾಗುತ್ತಿದೆ ಎಂದು ಪೋಷಕರು ದೂರು ಸಲ್ಲಿಸಿದ್ದು, ಪ್ರಾಂಶುಪಾಲರು ತೊಂದರೆಗಳನ್ನು ಪರಿಹರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.

ಮಕ್ಕಳಲ್ಲಿ ಯಾವುದೇ ಬೇಧಬಾವ ಮಾಡಬಾರದು, ಭಾಷೆ ಕೊರತೆಯ ನೆಪ ಹೇಳದೆ ಮಕ್ಕಳಿಗೆ ಸರಿಯಾಗಿ ತರಗತಿಗಳನ್ನು ಮಾಡಬೇಕು, ಎಲ್ಲಾ ರೀತಿಯ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಬೇಕು ಪೋಷಕರ ಸಭೆ ನಡೆಸಿ ಮಕ್ಕಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್ ಮಾತನಾಡಿ, ಆಯಾ ವಿಷಯಗಳಿಗೆ ಸಂಬಂಧಿಸಿದ ಶಿಕ್ಷಕರನ್ನು ಸದ್ಯದಲ್ಲಿ ನೇಮಕ ಮಾಡಲಾಗುವುದು, ಹಾಗೂ ಕಟ್ಟಡ ಕಾಮಗಾರಿ ಕೆಲಸವು ಅಂತಿಮ ಹಂತದಲ್ಲಿದ್ದು, ಇದರ ಬಗ್ಗೆ ಪೋಷಕರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.

ಈಗಾಗಲೇ ಶಿಕ್ಷಕರ ಸಂದರ್ಶನ ನಡೆಯುತ್ತಿದ್ದು ಆದಷ್ಟು ಬೇಗ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು. ಮಕ್ಕಳಿಗೆ ಆರ್ಥವಾಗುವ ರೀತಿಯಲ್ಲಿ ಪಾಠಗಳು ನಡೆಯಬೇಕು ಎಂದರು.

ಗಣಿತ ಹಾಗೂ ಹಿಂದಿ ವಿಷಯಗಳಲ್ಲಿ ಸ್ವಲ್ಪ ನಿಗಾವಹಿಸಿ ತರಗತಿಗಳನ್ನು ಮಾಡಿ ಉಳಿದ ವಿಷಯಗಳಂತೆ ಈವಿಷಯಗಳು ಸುಲಭವಲ್ಲ ಆದ್ದರಿಂದ ತರಗತಿಗಳನ್ನು ಸರಿಯಾಗಿ ನಡೆಸಿ ಮತ್ತೊಮ್ಮೆ ಪೋಷಕರಿಂದ ಯಾವುದೇ ದೂರುಗಳು ಬರಬಾರದು ಎಂದು ತಿಳಿಸಿದರು.

ಸಭೆಯಲ್ಲಿ ಕೇಂದ್ರಿಯ ಪ್ರಾಂಶುಪಾಲರಾದ ಭರತ್ ಲಾಲ್ ಮೀನಾ, ಮುಖಂಡರುಗಳಾದ ಪ್ರೊ. ಬಿ. ಜಯಪ್ರಕಾಶ್ ಗೌಡ, ಕೀಲಾರಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

2 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

2 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

2 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

2 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago