ಮಂಡ್ಯ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ: ಡಾ.ಕುಮಾರ

ಮಂಡ್ಯ:  ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ  ಪ್ರಾಂಶುಪಾಲರಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಪೋಷಕರ ಸಭೆ ಹಾಗೂ ಕೇಂದ್ರ ವಿದ್ಯಾಲಯದ ಕಟ್ಟಡ ಕಾಮಗಾರಿ ಸಭೆ ಕುರಿತು ಮಾತನಾಡಿದರು.

ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಹಾಗೂ ಇರುವ ಶಿಕ್ಷಕರು ಕೆಲಸಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ, ಸಂವಾಹನದಲ್ಲಿ ಭಾಷೆಯ ತೊಂದರೆ ಉಂಟಾಗುತ್ತಿದೆ ಎಂದು ಪೋಷಕರು ದೂರು ಸಲ್ಲಿಸಿದ್ದು, ಪ್ರಾಂಶುಪಾಲರು ತೊಂದರೆಗಳನ್ನು ಪರಿಹರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.

ಮಕ್ಕಳಲ್ಲಿ ಯಾವುದೇ ಬೇಧಬಾವ ಮಾಡಬಾರದು, ಭಾಷೆ ಕೊರತೆಯ ನೆಪ ಹೇಳದೆ ಮಕ್ಕಳಿಗೆ ಸರಿಯಾಗಿ ತರಗತಿಗಳನ್ನು ಮಾಡಬೇಕು, ಎಲ್ಲಾ ರೀತಿಯ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಬೇಕು ಪೋಷಕರ ಸಭೆ ನಡೆಸಿ ಮಕ್ಕಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್ ಮಾತನಾಡಿ, ಆಯಾ ವಿಷಯಗಳಿಗೆ ಸಂಬಂಧಿಸಿದ ಶಿಕ್ಷಕರನ್ನು ಸದ್ಯದಲ್ಲಿ ನೇಮಕ ಮಾಡಲಾಗುವುದು, ಹಾಗೂ ಕಟ್ಟಡ ಕಾಮಗಾರಿ ಕೆಲಸವು ಅಂತಿಮ ಹಂತದಲ್ಲಿದ್ದು, ಇದರ ಬಗ್ಗೆ ಪೋಷಕರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.

ಈಗಾಗಲೇ ಶಿಕ್ಷಕರ ಸಂದರ್ಶನ ನಡೆಯುತ್ತಿದ್ದು ಆದಷ್ಟು ಬೇಗ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು. ಮಕ್ಕಳಿಗೆ ಆರ್ಥವಾಗುವ ರೀತಿಯಲ್ಲಿ ಪಾಠಗಳು ನಡೆಯಬೇಕು ಎಂದರು.

ಗಣಿತ ಹಾಗೂ ಹಿಂದಿ ವಿಷಯಗಳಲ್ಲಿ ಸ್ವಲ್ಪ ನಿಗಾವಹಿಸಿ ತರಗತಿಗಳನ್ನು ಮಾಡಿ ಉಳಿದ ವಿಷಯಗಳಂತೆ ಈವಿಷಯಗಳು ಸುಲಭವಲ್ಲ ಆದ್ದರಿಂದ ತರಗತಿಗಳನ್ನು ಸರಿಯಾಗಿ ನಡೆಸಿ ಮತ್ತೊಮ್ಮೆ ಪೋಷಕರಿಂದ ಯಾವುದೇ ದೂರುಗಳು ಬರಬಾರದು ಎಂದು ತಿಳಿಸಿದರು.

ಸಭೆಯಲ್ಲಿ ಕೇಂದ್ರಿಯ ಪ್ರಾಂಶುಪಾಲರಾದ ಭರತ್ ಲಾಲ್ ಮೀನಾ, ಮುಖಂಡರುಗಳಾದ ಪ್ರೊ. ಬಿ. ಜಯಪ್ರಕಾಶ್ ಗೌಡ, ಕೀಲಾರಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago