ಮಂಡ್ಯ

ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್‌ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿಫೇಸ್ ವಿದ್ಯುತ್ ಜೊತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಂಡ್ಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್ಗಳಿಗೆ ಈಗಿರುವ ಏಳು ಗಂಟೆ ವಿದ್ಯುತ್ ಜೊತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ, ಪ್ರಸ್ತಾವನೆ ಆಧರಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಈ ಬಾರಿ ಹಿಂಗಾರಿನಲ್ಲಿ ಕೃಷಿ ಪ್ರದೇಶ ವಿಸ್ತರಣೆಯಾಗಲಿದ್ದು, ಹೆಚ್ಚುವರಿ ವಿದ್ಯುತ್ ಬೇಕಾಗುತ್ತದೆ ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ಆಧರಿಸಿ ಲೋಡ್ ಡಿಸ್ಪ್ಯಾಚ್ ಸೆಂಟರ್ ಮತ್ತು ಪಿಸಿಕೆಎಲ್ ನವರು ಲೆಕ್ಕ ಹಾಕಿದ್ದಾರೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಪ್ರದೇಶ ಕಳೆದ ಬಾರಿಗಿಂತ ಶೇಕಡಾ.30ರಷ್ಟು ಏರಿಕೆಯಾಗಲಿದೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

23 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

32 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

33 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

2 hours ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago