ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಅವರನ್ನು ಸ್ವಾಗತಿಸಲು ಕ್ಷೇತ್ರ ಸಜ್ಜಾಗಿದೆ.
ಪ್ರಧಾನಿ ಮೋದಿ ಅವರು ಆದಿಚುಂಚನಗಿರಿ ಮಠದಲ್ಲಿ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಯ ‘ಗುರು ಭೈರವೈಕ್ಯ ಮಂದಿರ’ವನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ, ಅಲ್ಲಿ ನಡೆಯುವ ಬಾಲಗಂಗಾಧರನಾಥ ಸ್ವಾಮೀಜಿಯವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲೂ ಭಾಗವಹಿಸುವರು. ನಂತರ ಬಿಜಿಎಸ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ, ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನಿ ಮೋದಿ ಅವರ ಭಾವಚಿತ್ರವುಳ್ಳ ಕಟೌಟ್ಗಳು, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ವಿದ್ಯುತ್ ದೀಪಾಲಂಕಾರದಿಂದ ಸಹ ಕ್ಷೇತ್ರ ಕಂಗೊಳಿಸುತ್ತಿದೆ.
ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ಸುರಕ್ಷತೆ, ಪ್ರೋಟೋಕಾಲ್ ಮತ್ತು ಲಾಜಿಸ್ಟಿಕ್ ವ್ಯವಸ್ಥೆಗಳ ಬಗ್ಗೆ ವಿಮರ್ಶಾ ಸಭೆ ನಡೆಸಿದ್ದಾರೆ.
ಎಸ್ಪಿಜಿ ಮತ್ತು ರಾಜ್ಯ ಪೊಲೀಸ್ ಪಡೆಗಳು ಬಿಗಿ ಭದ್ರತೆ ಒದಗಿಸಿವೆ. ಕ್ಷೇತ್ರದ ಸೂತ್ತಲೂ ಇಂಚಿಂಚೂ ತಪಾಸಣೆ ನಡೆಸಿ ಮುಂಜಾತ್ರತೆ ವಹಿಸಿದ್ದಾರೆ. ಇದಕ್ಕಾಗಿ 10 ತಂಡಗಳನ್ನು ನಿಯೋಜಿಸಲಾಗಿದೆ. ಹೆಲಿಕಾಪ್ಟರ್ ಲ್ಯಾಂಡಿಗ್ ಹಾಗೂ ಟೇಕ್ಆಫ್ ವೇಳೆ ಯಾವುದೇ ಸಣ್ಣ ಪುಟ್ಟ ಅಡಚಣೆಯಾಗದಂತೆ ಜಿಲ್ಲಾಡಳಿತ ಹಾಗೂ ಎಸ್ಪಿಜಿ ಕಟ್ಟೆಚ್ಚರ ವಹಿಸಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…