ಮಂಡ್ಯ

ಆಡಳಿತ ಯಂತ್ರ ಕುಸಿದು, ಭ್ರಷ್ಟಾಚಾರ ಮಿತಿ ಮೀರಿದೆ : ರಾಜ್ಯ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

ಶ್ರೀರಂಗಪಟ್ಟಣ : ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ತಾಲ್ಲೂಕು ಕಚೇರಿ ಎದುರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಘೋಷಣೆಗಳನ್ನು ಕೂಗಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಿಹಳ್ಳಿ ರಮೇಶ್ ಮಾತನಾಡಿ, ಭತ್ತ ಮತ್ತು ಮೆಕ್ಕೆ ಜೋಳ ಕಟಾವು ಶುರುವಾಗಿದ್ದರೂ ಧಾನ್ಯ ಖರೀದಿ ಕೇಂದ್ರ ತೆರೆದಿಲ್ಲ. ಮೆಕ್ಕೆ ಜೋಳ ಮುಗ್ಗಲು ಹಿಡಿದು ರೈತರು ನಷ್ಟ ಅನುಭವಿಸುತ್ತಿದ್ದಾರೆ. ರೈತರ ಪ್ರತಿಭಟನೆ ಸಂದರ್ಭದಲ್ಲಿ ಮುಧೋಳದಲ್ಲಿ ೮೪ ಟ್ರಾಕ್ಟರ್‌ಗಳು ಸುಟ್ಟು ಹೋಗಿ, ಮೂರು ವಾರ ಕಳೆದರೂ ಸಂತ್ರಸ್ತ ರೈತರಿಗೆ ಪರಿಹಾರ ನೀಡಿಲ್ಲ. ಹೈನುಗಾರರಿಗೆ ಹಾಲಿನ ಪ್ರೋತ್ಸಾಹ ಧನ ನೀಡಲು ಸರ್ಕಾರ ಮೀನ ಮೇಷ ಎಣಿಸುತ್ತಿದೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಯುವಪೀಳಿಗೆ ಉದ್ಯಮಿಗಳಾಗುವತ್ತ ಹೆಚ್ಚು ಗಮನ ಹರಿಸಬೇಕು : ಸಚಿವ ಎನ್.ಚಲುವರಾಯಸ್ವಾಮಿ ಸಲಹೆ

ಪಕ್ಷದ ಮುಖಂಡ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ರಾಜ್ಯ ಸರ್ಕಾರ ಕಬ್ಬಿಗೆ ಒಂದೊಂದು ಜಿಲ್ಲೆಯಲ್ಲಿ ಒಂದೊಂದು ದರ ನಿಗದಿ ಮಾಡಿದೆ. ಈ ತಾರತಮ್ಯ ಸರಿಪಡಿಸಿ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ರಾಜ್ಯದಲ್ಲಿ ಹಲವು ದಿನಗಳಿಂದ ಕುರ್ಚಿಗಾಗಿ ಗುದ್ದಾಟ ನಡೆಯುತ್ತಿದೆ. ಆಡಳಿತ ಯಂತ್ರ ಕುಸಿದಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿವೆ. ಸರ್ಕಾರಿ ಕಚೇರಿಗಳು ಭ್ರಷ್ಟಾಚಾರದ ಕೂಪಗಳಾಗಿವೆ. ಜನ ಸಾಮಾನ್ಯರ ಕಷ್ಟ ಕೇಳುವವರೇ ಇಲ್ಲದಂತಾಗಿದೆ ಎಂದು ದೂರಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಹೊಸಹಳ್ಳಿ ಮಹದೇವು, ನಗರ ಘಟಕದ ಅಧ್ಯಕ್ಷ ಜಿ.ಇ. ಸುಧಾಕರ್, ಮುಖಂಡರಾದ ಶಾಮಿಯಾನ ಪುಟ್ಟರಾಜು, ಪುಟ್ಟರಾಮು, ಉಮೇಶ್ ಕುಮಾರ್, ಹೇಮಂತಕುಮಾರ್, ಕುಮಾರ್, ಕಿರಣ್‌ಸಿಂಗ್, ಅಭಿಷೇಕ್, ಸುನಿಲ್, ಪಾಲಹಳ್ಳಿ ಟೆಂಪೋ ಪ್ರಕಾಶ್, ಪುರಸಭೆ ಮಾಜಿ ಸದಸ್ಯರಾದ ಗಂಜಾಂ ಶಿವು, ಎಸ್.ಟಿ.ರಾಜು, ಮಹದೇವಸ್ವಾಮಿ, ಚಂದ್ರು, ದರಸಗುಪ್ಪೆ ಸುರೇಶ್, ಹೊಸೂರು ಶಿವರಾಜು, ಕೆಂಪೇಗೌಡ, ರಾಮಕೃಷ್ಣ, ಮಂಜುನಾಥ್, ರಘು, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

1 min ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

54 mins ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

3 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

4 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

6 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

7 hours ago