ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ ಸರ್ ಎಂ ವಿ ಮೆರವಣಿಗೆ ನಡೆಸಿ ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಭಾಗಿಯಾದರು.
ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾ ನಿರತ ವಕೀಲರು ಕೆ ಆರ್ ಎಸ್ ಸೇರಿದಂತೆ ಕಾವೇರಿ ಕಣಿವೆ ಜಲಾಶಯಗಳಿಂದ ಬಿಟ್ಟಿರುವ ನೀರು ಸ್ಥಗಿತ ಮಾಡುವಂತೆ ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ ಮಾತನಾಡಿ, ರೈತರ ಹಿತ ಕಾಪಾಡದೇ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಕಣ್ಣು,ಕಿವಿ ಇಲ್ಲದಂತಾಗಿದೆ, ಜಲಾಶಯಗಳನ್ನ ಬರಿದು ಮಾಡಿದ್ದರೂ ನೀರು ಹರಿಸುತ್ತಿದೆ, ಮುಂದಿನ ದಿನಗಳಲ್ಲಿ ಜನತೆಗೆ ಕುಡಿಯಲು ನೀರು ಸಿಗದಂತಹ ಸಂಕಷ್ಟ ತಂದೊಡ್ಡಲಿದೆ ಎಂದರು.
ಕಾವೇರಿ ವಿಚಾರದಲ್ಲಿ ರಾಜಕಾರಣಿಗಳು ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು, ದೊಂಬರಾಟ ಆಡುವುದನ್ನು ಬಿಟ್ಟು ರೈತರ ಪರ ಹೋರಾಟ ಮಾಡಿ ಎಂದರು.
ಸುಪ್ರೀಂ ಕೋರ್ಟ್ ಸೆ, 21 ರವರೆಗೆ ವಿಚಾರಣೆಯನ್ನು ಮುಂದೂಡಿದೆ, ಅಲ್ಲಿಯವರೆಗೆ ನೀರು ಬಿಡಲು ನೀರು ಎಲ್ಲಿದೆ, ಜಲಾಶಯಗಳಿಂದ ಬಿಡುಗಡೆ ಮಾಡಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ವಾದ ಮಾಡುತ್ತಿರುವ ನ್ಯಾಯವಾದಿಗಳಿಗೆ ಸಮರ್ಪಕ ಮಾಹಿತಿ ಒದಗಿಸಲು ಸರ್ಕಾರ ಮುಂದಾಗಬೇಕು, ಸಮರ್ಪಕ ಮಾಹಿತಿ ಇಲ್ಲದೆ ವಾದ ಮಾಡಲು ಹೇಗೆ ಸಾಧ್ಯ, ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಪರಿಸ್ಥಿತಿ ಬಗ್ಗೆ ನ್ಯಾಯವಾದಿಗಳಿಗೆ ಮಾಹಿತಿ ಒದಗಿಸಿ ಕೊಡಿ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ಕೆ ಎಲ್ ಮರಿಸ್ವಾಮಿ.ಕಾರ್ಯದರ್ಶಿ ಸಿದ್ದರಾಜು, ಜಂಟಿ ಕಾರ್ಯದರ್ಶಿ ಮಹದೇವ್, ಖಜಾಂಚಿ ಮಹೇಶ್ ನೇತೃತ್ವ ವಹಿಸಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…