ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ ಸರ್ ಎಂ ವಿ ಮೆರವಣಿಗೆ ನಡೆಸಿ ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಭಾಗಿಯಾದರು.
ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾ ನಿರತ ವಕೀಲರು ಕೆ ಆರ್ ಎಸ್ ಸೇರಿದಂತೆ ಕಾವೇರಿ ಕಣಿವೆ ಜಲಾಶಯಗಳಿಂದ ಬಿಟ್ಟಿರುವ ನೀರು ಸ್ಥಗಿತ ಮಾಡುವಂತೆ ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ ಮಾತನಾಡಿ, ರೈತರ ಹಿತ ಕಾಪಾಡದೇ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಕಣ್ಣು,ಕಿವಿ ಇಲ್ಲದಂತಾಗಿದೆ, ಜಲಾಶಯಗಳನ್ನ ಬರಿದು ಮಾಡಿದ್ದರೂ ನೀರು ಹರಿಸುತ್ತಿದೆ, ಮುಂದಿನ ದಿನಗಳಲ್ಲಿ ಜನತೆಗೆ ಕುಡಿಯಲು ನೀರು ಸಿಗದಂತಹ ಸಂಕಷ್ಟ ತಂದೊಡ್ಡಲಿದೆ ಎಂದರು.
ಕಾವೇರಿ ವಿಚಾರದಲ್ಲಿ ರಾಜಕಾರಣಿಗಳು ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು, ದೊಂಬರಾಟ ಆಡುವುದನ್ನು ಬಿಟ್ಟು ರೈತರ ಪರ ಹೋರಾಟ ಮಾಡಿ ಎಂದರು.
ಸುಪ್ರೀಂ ಕೋರ್ಟ್ ಸೆ, 21 ರವರೆಗೆ ವಿಚಾರಣೆಯನ್ನು ಮುಂದೂಡಿದೆ, ಅಲ್ಲಿಯವರೆಗೆ ನೀರು ಬಿಡಲು ನೀರು ಎಲ್ಲಿದೆ, ಜಲಾಶಯಗಳಿಂದ ಬಿಡುಗಡೆ ಮಾಡಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ವಾದ ಮಾಡುತ್ತಿರುವ ನ್ಯಾಯವಾದಿಗಳಿಗೆ ಸಮರ್ಪಕ ಮಾಹಿತಿ ಒದಗಿಸಲು ಸರ್ಕಾರ ಮುಂದಾಗಬೇಕು, ಸಮರ್ಪಕ ಮಾಹಿತಿ ಇಲ್ಲದೆ ವಾದ ಮಾಡಲು ಹೇಗೆ ಸಾಧ್ಯ, ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಪರಿಸ್ಥಿತಿ ಬಗ್ಗೆ ನ್ಯಾಯವಾದಿಗಳಿಗೆ ಮಾಹಿತಿ ಒದಗಿಸಿ ಕೊಡಿ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ಕೆ ಎಲ್ ಮರಿಸ್ವಾಮಿ.ಕಾರ್ಯದರ್ಶಿ ಸಿದ್ದರಾಜು, ಜಂಟಿ ಕಾರ್ಯದರ್ಶಿ ಮಹದೇವ್, ಖಜಾಂಚಿ ಮಹೇಶ್ ನೇತೃತ್ವ ವಹಿಸಿದ್ದರು.
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…