ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ ಸರ್ ಎಂ ವಿ ಮೆರವಣಿಗೆ ನಡೆಸಿ ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಭಾಗಿಯಾದರು.
ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾ ನಿರತ ವಕೀಲರು ಕೆ ಆರ್ ಎಸ್ ಸೇರಿದಂತೆ ಕಾವೇರಿ ಕಣಿವೆ ಜಲಾಶಯಗಳಿಂದ ಬಿಟ್ಟಿರುವ ನೀರು ಸ್ಥಗಿತ ಮಾಡುವಂತೆ ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ ಮಾತನಾಡಿ, ರೈತರ ಹಿತ ಕಾಪಾಡದೇ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಕಣ್ಣು,ಕಿವಿ ಇಲ್ಲದಂತಾಗಿದೆ, ಜಲಾಶಯಗಳನ್ನ ಬರಿದು ಮಾಡಿದ್ದರೂ ನೀರು ಹರಿಸುತ್ತಿದೆ, ಮುಂದಿನ ದಿನಗಳಲ್ಲಿ ಜನತೆಗೆ ಕುಡಿಯಲು ನೀರು ಸಿಗದಂತಹ ಸಂಕಷ್ಟ ತಂದೊಡ್ಡಲಿದೆ ಎಂದರು.
ಕಾವೇರಿ ವಿಚಾರದಲ್ಲಿ ರಾಜಕಾರಣಿಗಳು ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು, ದೊಂಬರಾಟ ಆಡುವುದನ್ನು ಬಿಟ್ಟು ರೈತರ ಪರ ಹೋರಾಟ ಮಾಡಿ ಎಂದರು.
ಸುಪ್ರೀಂ ಕೋರ್ಟ್ ಸೆ, 21 ರವರೆಗೆ ವಿಚಾರಣೆಯನ್ನು ಮುಂದೂಡಿದೆ, ಅಲ್ಲಿಯವರೆಗೆ ನೀರು ಬಿಡಲು ನೀರು ಎಲ್ಲಿದೆ, ಜಲಾಶಯಗಳಿಂದ ಬಿಡುಗಡೆ ಮಾಡಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ವಾದ ಮಾಡುತ್ತಿರುವ ನ್ಯಾಯವಾದಿಗಳಿಗೆ ಸಮರ್ಪಕ ಮಾಹಿತಿ ಒದಗಿಸಲು ಸರ್ಕಾರ ಮುಂದಾಗಬೇಕು, ಸಮರ್ಪಕ ಮಾಹಿತಿ ಇಲ್ಲದೆ ವಾದ ಮಾಡಲು ಹೇಗೆ ಸಾಧ್ಯ, ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಪರಿಸ್ಥಿತಿ ಬಗ್ಗೆ ನ್ಯಾಯವಾದಿಗಳಿಗೆ ಮಾಹಿತಿ ಒದಗಿಸಿ ಕೊಡಿ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ಕೆ ಎಲ್ ಮರಿಸ್ವಾಮಿ.ಕಾರ್ಯದರ್ಶಿ ಸಿದ್ದರಾಜು, ಜಂಟಿ ಕಾರ್ಯದರ್ಶಿ ಮಹದೇವ್, ಖಜಾಂಚಿ ಮಹೇಶ್ ನೇತೃತ್ವ ವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…