ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ ಸರ್ ಎಂ ವಿ ಮೆರವಣಿಗೆ ನಡೆಸಿ ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಭಾಗಿಯಾದರು.
ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾ ನಿರತ ವಕೀಲರು ಕೆ ಆರ್ ಎಸ್ ಸೇರಿದಂತೆ ಕಾವೇರಿ ಕಣಿವೆ ಜಲಾಶಯಗಳಿಂದ ಬಿಟ್ಟಿರುವ ನೀರು ಸ್ಥಗಿತ ಮಾಡುವಂತೆ ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ ಮಾತನಾಡಿ, ರೈತರ ಹಿತ ಕಾಪಾಡದೇ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಕಣ್ಣು,ಕಿವಿ ಇಲ್ಲದಂತಾಗಿದೆ, ಜಲಾಶಯಗಳನ್ನ ಬರಿದು ಮಾಡಿದ್ದರೂ ನೀರು ಹರಿಸುತ್ತಿದೆ, ಮುಂದಿನ ದಿನಗಳಲ್ಲಿ ಜನತೆಗೆ ಕುಡಿಯಲು ನೀರು ಸಿಗದಂತಹ ಸಂಕಷ್ಟ ತಂದೊಡ್ಡಲಿದೆ ಎಂದರು.
ಕಾವೇರಿ ವಿಚಾರದಲ್ಲಿ ರಾಜಕಾರಣಿಗಳು ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು, ದೊಂಬರಾಟ ಆಡುವುದನ್ನು ಬಿಟ್ಟು ರೈತರ ಪರ ಹೋರಾಟ ಮಾಡಿ ಎಂದರು.
ಸುಪ್ರೀಂ ಕೋರ್ಟ್ ಸೆ, 21 ರವರೆಗೆ ವಿಚಾರಣೆಯನ್ನು ಮುಂದೂಡಿದೆ, ಅಲ್ಲಿಯವರೆಗೆ ನೀರು ಬಿಡಲು ನೀರು ಎಲ್ಲಿದೆ, ಜಲಾಶಯಗಳಿಂದ ಬಿಡುಗಡೆ ಮಾಡಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ವಾದ ಮಾಡುತ್ತಿರುವ ನ್ಯಾಯವಾದಿಗಳಿಗೆ ಸಮರ್ಪಕ ಮಾಹಿತಿ ಒದಗಿಸಲು ಸರ್ಕಾರ ಮುಂದಾಗಬೇಕು, ಸಮರ್ಪಕ ಮಾಹಿತಿ ಇಲ್ಲದೆ ವಾದ ಮಾಡಲು ಹೇಗೆ ಸಾಧ್ಯ, ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಪರಿಸ್ಥಿತಿ ಬಗ್ಗೆ ನ್ಯಾಯವಾದಿಗಳಿಗೆ ಮಾಹಿತಿ ಒದಗಿಸಿ ಕೊಡಿ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ಕೆ ಎಲ್ ಮರಿಸ್ವಾಮಿ.ಕಾರ್ಯದರ್ಶಿ ಸಿದ್ದರಾಜು, ಜಂಟಿ ಕಾರ್ಯದರ್ಶಿ ಮಹದೇವ್, ಖಜಾಂಚಿ ಮಹೇಶ್ ನೇತೃತ್ವ ವಹಿಸಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…