ಮಂಡ್ಯ

ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯಹರಿಶ್ಚಂದ್ರನ ನಂತರ ಇತರರಿಂದ ದುಡ್ಡು, ಲಂಚ ಪಡೆಯದೇ ಇರುವವರು, ಭೂಮಿಯ ಮೇಲೆ ಯಾರದ್ದೂ ಸಹಾಯ ಪಡೆಯದೇ ಇರುವವರು ದೇಶಕ್ಕೆ ಸ್ವತಂತ್ರ್ಯ ಬಂದ ನಂತರ ಯಾರಾದರೂ ಸತ್ಯವಂತ ಇದ್ದರೆ ಅದು ಕುಮಾರಸ್ವಾಮಿ ಮಾತ್ರ ಎಂದು ವ್ಯಂಗ್ಯವಾಡಿದರು.

ಇನ್ನು ಮಂಡ್ಯ ಜಿಲ್ಲೆಯ ಲೋಕಸಭಾ ಸದಸ್ಯರಾಗಿ, ಕೇಂದ್ರ ಮಂತ್ರಿಯಾಗಿ ಅವರ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಆಗ ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡಲು ಹೆಮ್ಮೆ ಎನಿಸುವುದು. ಉದಾಸೀನ ಹೇಳಿಕೆಗಳ ಮೂಲಕ ಸರ್ಕಾರವನ್ನು ಹಾಗೂ ಇತರರನ್ನು ಟೀಕಿಸುವುದೇ ನಾಯಕತ್ವ ಎನಿಸಿಕೊಳ್ಳುವಂತೆ ಮಾತನಾಡುತ್ತಾರೆ ಎಂದು ಕುಟುಕಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಸಾಧ್ಯವಾದಲ್ಲಿ ಜಿಲ್ಲೆಯಲ್ಲಿ ಪಾಂಡವಪುರದಿಂದ ಚನ್ನರಾಯಪಟ್ಟಣ ರಸ್ತೆ, ಮಂಡ್ಯದಿಂದ ಪ್ರವಾಸಿ ತಾಣ ಮೇಲುಕೋಟೆ ರಸ್ತೆ, ಮಂಡ್ಯದಿಂದ ನಾಗಮಂಗಲ ಮೂಲಕ ಕದಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇರುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಗೆ ಬದಲಿಸುವರೋ, ವಿಶೇಷ ಅನುದಾನ ತರುವರೋ ಅಭಿವೃದ್ಧಿ ಮಾಡಿದರೆ ಕುಮಾರಸ್ವಾಮಿ ಅವರನ್ನು ಹೊಗಳಿ, ಸನ್ಮಾನ ಮಾಡುತ್ತೇನೆ ಎಂದು ಮನವಿ ಮಾಡಿದರು. ಇಂದು ಮಂಡ್ಯಕ್ಕೆ ಕೃಷಿ ವಿವಿ, ನೂತನ ಮೈಷುಗರ್ ಕಾರ್ಖಾನೆ ಘೋಷಣೆಯನ್ನು ಸಂಪುಟದ ಮುಂದೆ ತರುತಿದ್ದು ಇಂತಹ ಯಾವುದಾದರು ಅಭಿವೃದ್ಧಿಯನ್ನು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಲಿಲ್ಲ. ಈಗ ಕೇಂದ್ರದ ಮಂತ್ರಿಯಾಗಿದ್ದು, ಇಂತಹ ಹತ್ತು ಅಭಿವೃದ್ಧಿ ಕೆಲಸಗಳನ್ನು ಜಿಲ್ಲೆಗೆ ತರಬಹುದು. ಒಂದು ವೇಳೆ ಅದನ್ನು ಮಾಡಿದರೆ ಅವರನ್ನು ಕೂಡ ಅಭಿನಂದಿಸುತ್ತೇನೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

9 mins ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

24 mins ago

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

1 hour ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

1 hour ago

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

2 hours ago

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

3 hours ago