ಮಂಡ್ಯ

ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸರ್ವಸನ್ನದ್ಧ: ಅಶೋಕ್.ವಿ.ಎಸ್

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯವು ಮುಂಚಿತವಾಗಿ ಭರ್ತಿ ಆಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ, ದ್ವಿದಳಧಾನ್ಯ, ಮುಸುಕಿನ ಜೋಳ ಹಾಗೂ ಎಣ್ಣೆಕಾಳು ಬೆಳೆಗಳ ಬಿತ್ತನೆ ಬೀಜ, ಹಸಿರೆಲೆ ಗೊಬ್ಬರ (ಸೆಣಬು ಹಾಗೂ ಚಂಬೆ) ಬಿತ್ತನೆ ಬೀಜವನ್ನು ಮತ್ತು ಲಘು ಪೋಷಕಾಂಶಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ.

ಕರ್ನಾಟಕ ರಾಜ್ಯ ಬೀಜ ನಿಗಮ ಹಾಗೂ ರಾಷ್ಟ್ರೀಯ ಬೀಜ ನಿಗಮಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಭತ್ತದ ಬಿತ್ತನೆ ಬೀಜಗಳನ್ನು ಮುಂಗಡ ದಾಸ್ತಾನಿಕರಿಸಲಾಗಿದ್ದು, ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಒ.ಗಳ ಮುಖಾಂತರ ಸಹಾಯಧನದಲ್ಲಿ ವಿತರಣೆಗೆ ಕೃಷಿ ಇಲಾಖೆಯು ಕ್ರಮ ಕೈಗೊಳ್ಳಲಾಗುತ್ತಿದೆ.

ರೈತರು ಖಾಸಗಿ ಬಿತ್ತನೆ ಬೀಜ ಮಾರಾಟಗಾರರಿಂದ ಬಿತ್ತನೆ ಬೀಜಗಳನ್ನು ಖರೀದಿಸುವ ಸಂದರ್ಭದಲ್ಲಿ, ಕೃಷಿ ವಿಶ್ವವಿದ್ಯಾನಿಲಯದಿಂದ ಬಿತ್ತನೆ ಅವಧಿಗೆ ಶಿಫಾರಸ್ಸು ಮಾಡಿರುವ ತಳಿ ಮತ್ತು ಹೈಬ್ರೀಡ್ ಬಿತ್ತನೆ ಬೀಜಗಳನ್ನು ಪರಿಗಣಿಸಲು ಕೋರಿದೆ.

ಮುಂಗಾರು ಹಂಗಾಮಿಗೆ ಜಿಲ್ಲೆಗೆ ಒಟ್ಟು 73065 ಮೆ.ಟನ್ ರಸಗೊಬ್ಬರ ಅವಶ್ಯಕತೆಯಿದ್ದು, ಪ್ರಸ್ತುತ 36598 ಮೆ.ಟನ್ ಪ್ರಮಾಣದ ರಸಗೊಬ್ಬರವು ಚಿಲ್ಲರೆ ರಸಗೊಬ್ಬರ ಮಾರಾಟಗಾರರು, ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಗೋದಾಮುಗಳಲ್ಲಿ ದಾಸ್ತಾನೀಕರಿಸಲಾಗಿದೆ. ಉಳಿಕೆ ರಸಗೊಬ್ಬರವನ್ನು ಮಾಹೆವಾರು ಬೇಡಿಕೆ ಅನುಗುಣವಾಗಿ ಸರಬರಾಜು ಪಡೆದು ಸಮರ್ಪಕ ವಿತರಣೆಗೆ ಕ್ರಮಕೈಗೊಳ್ಳಲಾಗುವುದು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರಿಗೆ ಸಭೆ ಆಯೋಜಿಸಿ, ಗುಣಮಟ್ಟದ ಕೃಷಿ ಪರಿಕರಗಳನ್ನು ಮಾತ್ರ ಮಾರಾಟ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪ್ರಸ್ತುತ ಜಿಲ್ಲೆಯ ರೈತರಿಗೆ ಅವಶ್ಯಕತೆಯಿರುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿರುವುದಿಲ್ಲ.

ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳು, ತಳಿಗಳ ಆಯ್ಕೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ವಿ.ಸಿ. ಫಾರಂನ ವಲಯ ಕೃಷಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

7 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

7 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

8 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

8 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

9 hours ago