ಮಂಡ್ಯ

ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸರ್ವಸನ್ನದ್ಧ: ಅಶೋಕ್.ವಿ.ಎಸ್

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯವು ಮುಂಚಿತವಾಗಿ ಭರ್ತಿ ಆಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ, ದ್ವಿದಳಧಾನ್ಯ, ಮುಸುಕಿನ ಜೋಳ ಹಾಗೂ ಎಣ್ಣೆಕಾಳು ಬೆಳೆಗಳ ಬಿತ್ತನೆ ಬೀಜ, ಹಸಿರೆಲೆ ಗೊಬ್ಬರ (ಸೆಣಬು ಹಾಗೂ ಚಂಬೆ) ಬಿತ್ತನೆ ಬೀಜವನ್ನು ಮತ್ತು ಲಘು ಪೋಷಕಾಂಶಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ.

ಕರ್ನಾಟಕ ರಾಜ್ಯ ಬೀಜ ನಿಗಮ ಹಾಗೂ ರಾಷ್ಟ್ರೀಯ ಬೀಜ ನಿಗಮಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಭತ್ತದ ಬಿತ್ತನೆ ಬೀಜಗಳನ್ನು ಮುಂಗಡ ದಾಸ್ತಾನಿಕರಿಸಲಾಗಿದ್ದು, ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಒ.ಗಳ ಮುಖಾಂತರ ಸಹಾಯಧನದಲ್ಲಿ ವಿತರಣೆಗೆ ಕೃಷಿ ಇಲಾಖೆಯು ಕ್ರಮ ಕೈಗೊಳ್ಳಲಾಗುತ್ತಿದೆ.

ರೈತರು ಖಾಸಗಿ ಬಿತ್ತನೆ ಬೀಜ ಮಾರಾಟಗಾರರಿಂದ ಬಿತ್ತನೆ ಬೀಜಗಳನ್ನು ಖರೀದಿಸುವ ಸಂದರ್ಭದಲ್ಲಿ, ಕೃಷಿ ವಿಶ್ವವಿದ್ಯಾನಿಲಯದಿಂದ ಬಿತ್ತನೆ ಅವಧಿಗೆ ಶಿಫಾರಸ್ಸು ಮಾಡಿರುವ ತಳಿ ಮತ್ತು ಹೈಬ್ರೀಡ್ ಬಿತ್ತನೆ ಬೀಜಗಳನ್ನು ಪರಿಗಣಿಸಲು ಕೋರಿದೆ.

ಮುಂಗಾರು ಹಂಗಾಮಿಗೆ ಜಿಲ್ಲೆಗೆ ಒಟ್ಟು 73065 ಮೆ.ಟನ್ ರಸಗೊಬ್ಬರ ಅವಶ್ಯಕತೆಯಿದ್ದು, ಪ್ರಸ್ತುತ 36598 ಮೆ.ಟನ್ ಪ್ರಮಾಣದ ರಸಗೊಬ್ಬರವು ಚಿಲ್ಲರೆ ರಸಗೊಬ್ಬರ ಮಾರಾಟಗಾರರು, ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಗೋದಾಮುಗಳಲ್ಲಿ ದಾಸ್ತಾನೀಕರಿಸಲಾಗಿದೆ. ಉಳಿಕೆ ರಸಗೊಬ್ಬರವನ್ನು ಮಾಹೆವಾರು ಬೇಡಿಕೆ ಅನುಗುಣವಾಗಿ ಸರಬರಾಜು ಪಡೆದು ಸಮರ್ಪಕ ವಿತರಣೆಗೆ ಕ್ರಮಕೈಗೊಳ್ಳಲಾಗುವುದು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರಿಗೆ ಸಭೆ ಆಯೋಜಿಸಿ, ಗುಣಮಟ್ಟದ ಕೃಷಿ ಪರಿಕರಗಳನ್ನು ಮಾತ್ರ ಮಾರಾಟ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪ್ರಸ್ತುತ ಜಿಲ್ಲೆಯ ರೈತರಿಗೆ ಅವಶ್ಯಕತೆಯಿರುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿರುವುದಿಲ್ಲ.

ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳು, ತಳಿಗಳ ಆಯ್ಕೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ವಿ.ಸಿ. ಫಾರಂನ ವಲಯ ಕೃಷಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago