ಮಂಡ್ಯ: ಅರವಿಂದ್ ಕೇಜ್ರಿವಾಲ್ ದುಡುಕಿನ ನಿರ್ಧಾರದಿಂದಲೇ ಈ ಚುನಾವಣೆಯಲ್ಲಿ ಸೋಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಭರ್ಜರಿ ಜಯಗಳಿಸಿದೆ. ಚುನಾವಣೆಯಲ್ಲಿ ಎಎಪಿ ಘಟಾನುಘಟಿ ನಾಯಕರನ್ನೇ ಬಿಜೆಪಿ ಅಭ್ಯರ್ಥಿಗಳು ಮಕಾಡೆ ಮಲಗುವಂತೆ ಮಾಡಿದ್ದಾರೆ.
ಈ ಫಲಿತಾಂಶದ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ದೆಹಲಿ ಚುನಾವಣೆ ಫಲಿತಾಂಶ ವಿಶೇಷ ಏನಲ್ಲ. ಇಂಡಿಯಾ ಒಕ್ಕೂಟದ ಜೊತೆ ಆಪ್ ಇರಬೇಕಿತ್ತು. ಆದರೆ ಅರವಿಂದ್ ಕೇಜ್ರಿವಾಲ್ ದುಡುಕಿನ ನಿರ್ಧಾರ ತೆಗೆದುಕೊಂಡರು. ಪರಿಣಾಮ ಈ ಚುನಾವಣೆಯಲ್ಲಿ ಎಎಪಿ ಹಾಗೂ ಕಾಂಗ್ರೆಸ್ಗೆ ಸೋಲಾಗಿದೆ. ಆಪ್ ಹಾಗೂ ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಈ ಚುನಾವಣೆಯಲ್ಲಿ ಹೆಚ್ಚು ಲಾಭ ಪಡೆದುಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…