ಮಂಡ್ಯ

ಮಂಡ್ಯ ಜಿಲ್ಲೆಗೆ ಕೃಷಿ ವಿ.ವಿ ; ರೈತರ ಸದುಪಯೋಗಕ್ಕೆ ಸಚಿವರ ಕರೆ

ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.

ಇಂದು ಕೃಷಿ ಇಲಾಖೆಯ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಹೈಟೆಕ್ ಹಾರ್ವೆಸ್ಟ್ ಹಬ್ ಮತ್ತು ಸೆಕೆಂಡರಿ ಕೃಷಿ ಯೋಜನೆಗಳ ರೈತ ಫಲಾನುಭವಿಗಳಿಗೆ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ 2 ಸಾವಿರ ಕೋಟಿಗೂ ಹೆಚ್ಚಿನ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ರಾಜ್ಯದ ರೈತರಿಗೆ ನೀಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ವರ್ಗಗಳಿಗೆ ರೂ 50 ಲಕ್ಷ ಮತ್ತು ಸಾಮಾನ್ಯ ವರ್ಗಗಳಿಗೆ ರೂ 40 ಲಕ್ಷ ಸಬ್ಸಿಡಿಯನ್ನು ದರದಲ್ಲಿ ಹೈಟೆಕ್ ಹಾರ್ವೆಸ್ಟ್ ಹಬ್ ಖರೀದಿಸಲು ನೀಡಲಾಗುತ್ತಿದೆ. ದೇಶದ ಯಾವುದೇ ರಾಜ್ಯದಲ್ಲೂ ಸದರಿ ಯೋಜನೆ ಇಲ್ಲ ಎನ್ನಬಹುದು. ಹೈಟೆಕ್ ಹಾರ್ವೆಸ್ಟ್ ಹಬ್ನ ಸಂಪೂರ್ಣ ಯೋಜನೆ ರಾಜ್ಯ ಸರ್ಕಾರದ್ದಾಗಿದೆ, ರಾಜ್ಯದಲ್ಲಿ 400 ಕ್ಕೂ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ರೈತರಿಗೆ ನೀಡಲಾಗಿದೆ ಎಂದು ಹೇಳಿದರು.

ವಿವಿಧ ಬೆಳೆಗಳ ಕಟಾವಿಗೆ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳು ಉಪಯುಕ್ತವಾಗಿದೆ. ಕೃಷಿ ಕೆಲಸಗಳಿಗೆ ಮಾನವ ಸಂಪನ್ಮೂಲ ಕಡಿಮೆಯಾಗಿರುವ ಈ ಕಾಲಘಟ್ಟದಲ್ಲಿ ಈ ಯಂತ್ರೋಪಕರಣಗಳನ್ನು ಬಳಸಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಬೆಳೆಗಳನ್ನು ಕಟಾವು ಮಾಡಬಹುದಾಗಿದೆ ಹಾಗೂ ರೈತನಿಗೆ ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ನಾನು ಕೃಷಿ ಸಚಿವನಾಗಿ ರೈತರಿಗೆ ಕೃಷಿ ತಾಂತ್ರಿಕ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇನೆ ಎಂದು ಹೇಳಿದರು.

ನಮ್ಮ ಸರ್ಕಾರ ಬರುವ ಮೊದಲು 12 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ವಿಮೆ ತೆಗೆದುಕೊಂಡಿದ್ದರು ಆದರೆ ಇಂದು 28 ಲಕ್ಷಕ್ಕೂ ಅಧಿಕ ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಿದ್ದಾರೆ. ವಿಮೆಯಲ್ಲಿ ಸರಿಸುಮಾರು 6,000 ಕೋಟಿಗೂ ಹೆಚ್ಚು ಹಣವನ್ನು ನೀಡಲಾಗಿದೆ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಚೆಲುವರಾಯಸ್ವಾಮಿ ಅವರು ಕೃಷಿ ಸಚಿವರಾದ ನಂತರ ರಾಜ್ಯದ ರೈತರ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮಂಡ್ಯ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಜಿಲ್ಲೆಯ ರೈತರ ಅಭಿವೃದ್ಧಿಗಾಗಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ್ದಾರೆ ಎಂದು ಹೇಳಿದರು.

ನಂತರ ಅರ್ಹ ಫಲಾನುಭವಿಗಳಿಗೆ 13 ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಆರ್ ನಂದಿನಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

19 mins ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

24 mins ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

44 mins ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

2 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

2 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

2 hours ago