ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಇಂದು ಕೃಷಿ ಇಲಾಖೆಯ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಹೈಟೆಕ್ ಹಾರ್ವೆಸ್ಟ್ ಹಬ್ ಮತ್ತು ಸೆಕೆಂಡರಿ ಕೃಷಿ ಯೋಜನೆಗಳ ರೈತ ಫಲಾನುಭವಿಗಳಿಗೆ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ 2 ಸಾವಿರ ಕೋಟಿಗೂ ಹೆಚ್ಚಿನ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ರಾಜ್ಯದ ರೈತರಿಗೆ ನೀಡಲಾಗಿದೆ ಎಂದು ಹೇಳಿದರು.
ಪರಿಶಿಷ್ಟ ವರ್ಗಗಳಿಗೆ ರೂ 50 ಲಕ್ಷ ಮತ್ತು ಸಾಮಾನ್ಯ ವರ್ಗಗಳಿಗೆ ರೂ 40 ಲಕ್ಷ ಸಬ್ಸಿಡಿಯನ್ನು ದರದಲ್ಲಿ ಹೈಟೆಕ್ ಹಾರ್ವೆಸ್ಟ್ ಹಬ್ ಖರೀದಿಸಲು ನೀಡಲಾಗುತ್ತಿದೆ. ದೇಶದ ಯಾವುದೇ ರಾಜ್ಯದಲ್ಲೂ ಸದರಿ ಯೋಜನೆ ಇಲ್ಲ ಎನ್ನಬಹುದು. ಹೈಟೆಕ್ ಹಾರ್ವೆಸ್ಟ್ ಹಬ್ನ ಸಂಪೂರ್ಣ ಯೋಜನೆ ರಾಜ್ಯ ಸರ್ಕಾರದ್ದಾಗಿದೆ, ರಾಜ್ಯದಲ್ಲಿ 400 ಕ್ಕೂ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ರೈತರಿಗೆ ನೀಡಲಾಗಿದೆ ಎಂದು ಹೇಳಿದರು.
ವಿವಿಧ ಬೆಳೆಗಳ ಕಟಾವಿಗೆ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳು ಉಪಯುಕ್ತವಾಗಿದೆ. ಕೃಷಿ ಕೆಲಸಗಳಿಗೆ ಮಾನವ ಸಂಪನ್ಮೂಲ ಕಡಿಮೆಯಾಗಿರುವ ಈ ಕಾಲಘಟ್ಟದಲ್ಲಿ ಈ ಯಂತ್ರೋಪಕರಣಗಳನ್ನು ಬಳಸಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಬೆಳೆಗಳನ್ನು ಕಟಾವು ಮಾಡಬಹುದಾಗಿದೆ ಹಾಗೂ ರೈತನಿಗೆ ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ನಾನು ಕೃಷಿ ಸಚಿವನಾಗಿ ರೈತರಿಗೆ ಕೃಷಿ ತಾಂತ್ರಿಕ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇನೆ ಎಂದು ಹೇಳಿದರು.
ನಮ್ಮ ಸರ್ಕಾರ ಬರುವ ಮೊದಲು 12 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ವಿಮೆ ತೆಗೆದುಕೊಂಡಿದ್ದರು ಆದರೆ ಇಂದು 28 ಲಕ್ಷಕ್ಕೂ ಅಧಿಕ ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಿದ್ದಾರೆ. ವಿಮೆಯಲ್ಲಿ ಸರಿಸುಮಾರು 6,000 ಕೋಟಿಗೂ ಹೆಚ್ಚು ಹಣವನ್ನು ನೀಡಲಾಗಿದೆ ಎಂದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಚೆಲುವರಾಯಸ್ವಾಮಿ ಅವರು ಕೃಷಿ ಸಚಿವರಾದ ನಂತರ ರಾಜ್ಯದ ರೈತರ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮಂಡ್ಯ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಜಿಲ್ಲೆಯ ರೈತರ ಅಭಿವೃದ್ಧಿಗಾಗಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ್ದಾರೆ ಎಂದು ಹೇಳಿದರು.
ನಂತರ ಅರ್ಹ ಫಲಾನುಭವಿಗಳಿಗೆ 13 ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಆರ್ ನಂದಿನಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…