ಮಂಡ್ಯ

ಸರ್ಕಾರದಿಂದ ಮನೆ ಬಾಗಿಲಿಗೆ ಯೋಜನೆ ತಲುಪಿಸುವ ಗುರಿ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮನೆ ಮನೆ ತೆರಳಿ ಖಾತೆ ಮಾಡಬೇಕು ಎಂಬ ಆದೇಶ ಹೊರಡಿಸಿದ್ದಾರೆ. ಹಲವಾರು ದಿನಗಳಿಂದ ಬಾಕಿಯಿದ್ದ ಒಟ್ಟು 15,000 ಪ್ರಕರಣಗಳಲ್ಲಿ 13,000 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಕೇವಲ 1 ವಾರದಲ್ಲಿಯೇ 416 ಪ್ರಕರಣಗಳ ಸರ್ವೇ ಮಾಡಲಾಗಿದೆ. ಜೊತೆಗೆ ಪೌತಿ ಖಾತೆಗಳನ್ನು ಸರಿಯಾದ ರೀತಿಯಲ್ಲಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ. 1960- 70ರಲ್ಲಿ ಮಂಜೂರಾಗಿರುವ ಕಂದಾಯ ಇಲಾಖೆಯ ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣೆ ಮತ್ತು ಪೋಡಿ ದಾಖಲೆಗೆ ಸಂಬಂಧಪಟ್ಟಂತೆ ಶಾಶ್ವತ ದಾಖಲೆಗಳನ್ನು ನೀಡಲಾಗುತ್ತಿದೆ ಎಂದರು.

ನಮ್ಮ ಸರ್ಕಾರವು ಜನರ ಮನೆಯ ಬಾಗಿಲಿಗೆ ಅನೇಕ ಯೋಜನೆಗಳನ್ನು ನೀಡುವ ಮೂಲಕ ಅನುಕೂಲ ಮಾಡುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳಿಂದ ಸಾರ್ವಜನಿಕರು ಸದುಪಯೋಗ ಪಡೆಯುತ್ತಿದ್ದಾರೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago