ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮನೆ ಮನೆ ತೆರಳಿ ಖಾತೆ ಮಾಡಬೇಕು ಎಂಬ ಆದೇಶ ಹೊರಡಿಸಿದ್ದಾರೆ. ಹಲವಾರು ದಿನಗಳಿಂದ ಬಾಕಿಯಿದ್ದ ಒಟ್ಟು 15,000 ಪ್ರಕರಣಗಳಲ್ಲಿ 13,000 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಕೇವಲ 1 ವಾರದಲ್ಲಿಯೇ 416 ಪ್ರಕರಣಗಳ ಸರ್ವೇ ಮಾಡಲಾಗಿದೆ. ಜೊತೆಗೆ ಪೌತಿ ಖಾತೆಗಳನ್ನು ಸರಿಯಾದ ರೀತಿಯಲ್ಲಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ. 1960- 70ರಲ್ಲಿ ಮಂಜೂರಾಗಿರುವ ಕಂದಾಯ ಇಲಾಖೆಯ ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣೆ ಮತ್ತು ಪೋಡಿ ದಾಖಲೆಗೆ ಸಂಬಂಧಪಟ್ಟಂತೆ ಶಾಶ್ವತ ದಾಖಲೆಗಳನ್ನು ನೀಡಲಾಗುತ್ತಿದೆ ಎಂದರು.
ನಮ್ಮ ಸರ್ಕಾರವು ಜನರ ಮನೆಯ ಬಾಗಿಲಿಗೆ ಅನೇಕ ಯೋಜನೆಗಳನ್ನು ನೀಡುವ ಮೂಲಕ ಅನುಕೂಲ ಮಾಡುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳಿಂದ ಸಾರ್ವಜನಿಕರು ಸದುಪಯೋಗ ಪಡೆಯುತ್ತಿದ್ದಾರೆ ಎಂದರು.
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…