ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮನೆ ಮನೆ ತೆರಳಿ ಖಾತೆ ಮಾಡಬೇಕು ಎಂಬ ಆದೇಶ ಹೊರಡಿಸಿದ್ದಾರೆ. ಹಲವಾರು ದಿನಗಳಿಂದ ಬಾಕಿಯಿದ್ದ ಒಟ್ಟು 15,000 ಪ್ರಕರಣಗಳಲ್ಲಿ 13,000 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಕೇವಲ 1 ವಾರದಲ್ಲಿಯೇ 416 ಪ್ರಕರಣಗಳ ಸರ್ವೇ ಮಾಡಲಾಗಿದೆ. ಜೊತೆಗೆ ಪೌತಿ ಖಾತೆಗಳನ್ನು ಸರಿಯಾದ ರೀತಿಯಲ್ಲಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ. 1960- 70ರಲ್ಲಿ ಮಂಜೂರಾಗಿರುವ ಕಂದಾಯ ಇಲಾಖೆಯ ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣೆ ಮತ್ತು ಪೋಡಿ ದಾಖಲೆಗೆ ಸಂಬಂಧಪಟ್ಟಂತೆ ಶಾಶ್ವತ ದಾಖಲೆಗಳನ್ನು ನೀಡಲಾಗುತ್ತಿದೆ ಎಂದರು.
ನಮ್ಮ ಸರ್ಕಾರವು ಜನರ ಮನೆಯ ಬಾಗಿಲಿಗೆ ಅನೇಕ ಯೋಜನೆಗಳನ್ನು ನೀಡುವ ಮೂಲಕ ಅನುಕೂಲ ಮಾಡುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳಿಂದ ಸಾರ್ವಜನಿಕರು ಸದುಪಯೋಗ ಪಡೆಯುತ್ತಿದ್ದಾರೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…