ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.
ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ ಬದುಕನ್ನು ಬೆಸೆಯುವ ಸ್ವರೂಪದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದರಲ್ಲಿ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಸಂಘ ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ ಸಿಬ್ಬಂದಿ ಹೆಚ್ಚಿನ ಕಾಳಜಿ, ಪರಿಶ್ರಮ ವಹಿಸಬೇಕು ಎಂದರು.
ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರೂ ಬಿಡುಗಡೆಗೆ ಶಿಫಾರಸು ಮಾಡಿದೆ. ಆದಷ್ಟು ಅದರ ಇತಿ ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದು ಚಲುವರಾಯಸ್ವಾಮಿ ಅವರು ಸಲಹೆ ನೀಡಿದರು.
ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರಾದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳ ಅಭಿಪ್ರಾಯ, ಸಮಿತಿಗಳ ತೀರ್ಮಾನಗಳನ್ನು ಆಲಿಸಿದ ಸಚಿವರು ಸಾಹಿತ್ಯ-ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಸಂಘಟನೆ ಮಾಡಲು ಕರೆ ನೀಡಿದರು.
ಮಂಡ್ಯ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ವ್ಯಾಪಕ ಪ್ರಚಾರ, ಉತ್ತಮ ಅಲಂಕಾರ ಮಾಡಬೇಕು. ಆಕರ್ಷಕ ಮೆರವಣಿಗೆ, ಅರ್ಥಪೂರ್ಣ ವಿಚಾರಗೋಷ್ಠಿ, ಕಾರ್ಯಕ್ರಮಗಳು, ಮುದ್ದೆ ಬಸ್ಸಾರು ಸೇರಿದಂತೆ ಸ್ಥಳೀಯ ಆಹಾರ ಹಾಗೂ ಉತ್ತರ ಕರ್ನಾಟಕದ ತಿನಿಸಿಸುಗಳ ಸಮಿಶ್ರಣಗೊಂಡ ಊಟೋಪಚಾರ ವ್ಯವಸ್ಥೆ ಮಾಡುವಂತೆ ಸಚಿವ ಚಲುವರಾಯಸ್ವಾಮಿ ಸಲಹೆ ನೀಡಿದರು.
ಸಾಹಿತ್ಯ ಸಮ್ಮೇಳನದ ಮೊದಲೆರಡು ದಿನ ಸಂಜೆಯ ನಂತರ ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಮಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸಮ್ಮೆಳನಕ್ಕೆ ವಿಶೇಷ ಬಸ್ ಸಂಪರ್ಕ ವ್ಯವಸ್ಥೆ ಮಾಡಬೇಕು ಎಂದು ಸಚಿವ ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ (ಗಣಿಗ), ಉದಯ್ ಗೌಡ, ದರ್ಶನ್ ಪುಟ್ಟಣ್ಣಯ್ಯ, ವಿಧಾನಸಭಾ ಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾದ ನಾಡೋಜ ಮಹೇಶ್ ಜೋಷಿ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದು, ಸಮ್ಮೇಳನದ ಯಶಸ್ವಿ ಸಂಘಟನೆ ಕುರಿತು ಅಮೂಲ್ಯ ಸಲಹೆಗಳನ್ನು ನೀಡಿದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…