ಮಂಡ್ಯ

ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಕಲ ಸಿದ್ದತೆ: ಶಾಸಕ ಪಿ.ಎಂ ನರೇಂದ್ರಸ್ವಾಮಿ

ಮಂಡ್ಯ: ಪ್ರಕೃತ್ತಿ ದತ್ತವಾಗಿ ಚಲುವನ್ನು ಹೊಂದಿರುವ ಗಗನಚುಕ್ಕಿಗೆ ಜನರನ್ನು ಸೆಳೆಯಲು ವಿಜೃಂಭಣೆಯಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ.

ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿಯ ರೂಪದಲ್ಲಿವ ಅಲಂಕೃತವಾಗಿ ಜನರನ್ನು ಜಲಪಾತೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸುತ್ತಿದೆ.

ಜಲಪಾತೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹೆಚ್ಚು ಜನರು ಭಾಗವಹಿಸುವಂತೆ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 14 ರಂದು ಸಂಜೆ 6 ಗಂಟೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಸ್ಪೆಷಲ್ ರೂಟ್ ಗಳಲ್ಲಿ ಬಸ್ ಮಳವಳ್ಳಿ ತಾಲ್ಲೂಕಿನ ವಿವಿಧ ಭಾಗಗಳಿಂದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಬಂದು ಹೋಗಲು ಕೆ‌ಎಸ್.ಆರ್.ಟಿ.ಸಿ ವತಿಯಿಂದ ವಿಶೇಷ ಬಸ್ ರೂಟ್ ಗಳ ವ್ಯವಸ್ಥೆ ಮಾಡಲಾಗಿದೆ. ರೊಟ್ಟಿಕಟ್ಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಗಳವರೆಗೆ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿಶೇಷ ದೀಪ ಅಲಂಕಾರ ಸೆಪ್ಟೆಂಬರ್‌ 14 ಹಾಗೂ 15 ರಂದು ಜಲಪಾತಕ್ಕೆ ವಿಶೇಷ ದೀಪಾಲಂಕಾರ ಹಾಗೂ ಲೇಜರ್ ಶೋ ವ್ಯವಸ್ಥೆ. ಬರುವ ಸಾರ್ವಜನಿಕರಿಗೆ ಉಚಿತ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಳದಿಂಗಳ ಕಾರ್ಯಕ್ರಮ ಪ್ರಕೃತಿ ತಾಣವಾದ ಗಗನಚುಕ್ಕಿ ಜಲಪಾತದ ಮುಂಭಾಗ ದೊಡ್ಡದಾದ ಮೆಟ್ಟಿಲು ಹಾಗೂ ಆವರಣ ನಿರ್ಮಾಣವಾಗುತ್ತಿದ್ದು, ಇಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಶಾಲಾ ಕಾಲೇಜಿನವರು ವಿಶೇಷ ಬೆಳದಿಂಗಳ ಕಾರ್ಯಕ್ರಮ ಹಮ್ಮಿಕೊಳ್ಳಲು ಅವಕಾಶ ನೀಡಲಾಗುವುದು ಎಂದರು‌.

ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
ಇದಲ್ಲದೇ ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಟನಲ್ ಅಕ್ವೇರಿಯಂ, ಸೇರಿದಂತೆ ಜಲ ಕ್ರೀಡೆ ಸಹ ನಡೆಸಲು ಅವಕಾಶವಿದ್ದು, ಈ ಯೋಜನೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸ್ಥಳೀಯ ಕಲಾವಿದರಿಗೂ ಅವಕಾಶ

ಗಗನಚಯಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಅವಕಾಶ ನೀಡಲಾಗಿದೆ. ಸೆ.14 ರಂದು ಬೆಳಿಗ್ಗೆ 11 ಗಂಟೆಗೆ ಸಂಕೇತಿಕವಾಗಿ ಕಲಾತಂಡಗಳ ಮೆರವಣಿಗೆಯೊಂದಿಗೆ ಚಾಲನೆ ನೀಡಲಾಗುವುದು. ಎರಡು ದಿನಗಳ ಕಾಲ ಬೆಳಿಗ್ಗೆ 11 ರಿಂದ 2 ರವರೆಗೆ ಸ್ಥಳೀಯ ಕಲಾವಿದರಿಗೆ ಕಾರ್ಯಕ್ರಮ ನೀಡಲಿದ್ದಾರೆ ಎಂದರು.

ಎರಡು ದಿನಗಳು ನಡೆಯುವ ಕಾರ್ಯಕ್ರಮದ ವಿವರ
ಸೆಪ್ಟೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ನಾಗೇಶ್ ಕಂದೇಕಾಲ ಮತ್ತು (ಕಲಾವತಿ ದಯಾನಂದ್, ಅಜಯ್ ವಾರಿಯರ್, ಜೋಗಿ ಸುನಿತಾ, ಚಿಂತನ್ ವಿಕಾಸ್, ಸುಹನಾ ಸೈಯದ್) ಇವರಿಂದ ಭಾವಗೀತೆಗಳು.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ.

ಸಂಜೆ 7 ಗಂಟೆಯಿಂದ ರಾತ್ರಿ 10.30 ರವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ.

15 ರಂದು ಭಾನುವಾರ

ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು,

ಮದ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ.

6 ರಿಂದ ರಾತ್ರಿ 10.30 ಗಂಟೆವರೆಗೆ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago