ಮಂಡ್ಯ

ಶ್ರೀರಂಗಪಟ್ಟಣ ದಸರಾ ಆಚರಣೆಗೆ ಸಕಲ ಸಿದ್ದತೆ: ಡಾ.ಕುಮಾರ

ಮಂಡ್ಯ: ಈ‌ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಪಾರಂಪರಿಕ ಹಾಗೂ ವಿಜೃಂಭಣೆಯಿಂದ  ಅಕ್ಟೋಬರ್ 4 -7 ರವರೆಗೆ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಅವರು ಇಂದು ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ನಡೆದ ದಸರಾ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ರೀತಿಯ ಅಡಚಣೆ ತೊಂದರೆ ಉಂಟಾಗದಂತೆ ನಿಗಾವಹಿಸಿ ಎಂದರು.

ಶ್ರೀರಂಗಪಟ್ಟಣ ದಸರಾ ಆಚರಣೆಯ ಸಕಲಸಿದ್ಧತೆಗಳ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ವಿಚಾರಗಳನ್ನು ಚರ್ಚಿಸಿ ಕಳೆದ ದಸರಾ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆ ತುಂಬಾ ಚಿಕ್ಕದಿದ್ದ ಕಾರಣ ಸ್ವಲ್ಪ ಪ್ರಮಾಣದ ತೊಂದರೆಗಳು ಆಗಿತ್ತು, ಆದ್ದರಿಂದ ಈ ಬಾರಿ ಕಾರ್ಯಕ್ರಮದ ವೇದಿಕೆಯನ್ನು ಅಗತ್ಯತೆಗೆ ತಕ್ಕಂತೆ ದೊಡ್ಡದಾಗಿ ನಿರ್ಮಾಣ ಮಾಡಬೇಕು‌ ಎಂದರು.

ಆಹ್ವಾನ ಪತ್ರಿಕೆ ವಿತರಣೆ
ದಸರಾ ಆಚರಣೆಯ ಆಹ್ವಾನ ಪತ್ರಿಕೆಗಳನ್ನು ಆದಷ್ಟು ಬೇಗ ಸಿದ್ದಪಡಿಸಬೇಕು. ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ಸಂಘ ಸಂಸ್ಥೆಗಳಿಗೆ ವಿತರಿಸಿ ಗೌರವಪೂರ್ವಕವಾಗಿ ಆಹ್ವಾನಿಸಬೇಕು. ಆಹ್ವಾನ ಪತ್ರಿಕೆಯೊಂದಿಗೆ ದಸರಾ ಕಾರ್ಯಕ್ರಮಗಳ ವಿವರ ನೀಡುವ 5 ದಸರಾ ಕರಪತ್ರಗಳನ್ನು ಸೇರಿಸಿ ಕೊಡಬೇಕು, ಆಹ್ವಾನ ಪತ್ರಿಕೆ ವಿತರಣೆಯಲ್ಲಿ ಯಾವುದೇ ದೂರು ಬರಬಾರದು ಎಂದರು.

ಕುಡಿಯುವ ನೀರಿನ ವ್ಯವಸ್ಥೆ
ಕುಡಿಯುವ ನೀರಿನ ವ್ಯವಸ್ಥೆ ಬಹಳ ಮುಖ್ಯವಾದ ಅಂಶ ಬಂದಂತಹ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ವೇಳೆಯಲ್ಲಿ ವೇದಿಕೆಯ ಬಳಿ ಹಾಗೂ ವೀಕ್ಷಕರ ಗ್ಯಾಲರಿಯ ಬಳಿ ಕುಡಿಯುವ ನೀರಿನ ಕ್ಯಾನ್ ಗಳ ವ್ಯವಸ್ಥೆ ಮಾಡಬೇಕು ಎಂದರು.

ಆರೋಗ್ಯ ತಪಾಸಣಾ ಶಿಬಿರ
ಆರೋಗ್ಯ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ ಎರಡು ಪಾಳಿಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿ ಎಂದರು.

ಆಹಾರ ಮೇಳ
ಆಹಾರ ಮೇಳದಲ್ಲಿ 40 ಮಳಿಗೆ (ಕೌಂಟರ್) ಗಳನ್ನು ತೆರೆಯಲಿದ್ದು, ಆಹಾರ ಮಳಿಗೆಗಳನ್ನು ಪರವಾನಗಿ ಹೊಂದಿರುವವರಿಗೆ ಮಾತ್ರ ನೀಡಬೇಕು. ಅನುಮತಿ ಪಡೆಯುವ ಎಲ್ಲಾ ಮಳಿಗೆಯ ತಯಾರಿಕೆಯ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ಹೇಳಿದರು.

ಆಹಾರ ಮೇಳದಲ್ಲಿ ಕೆಲಸಮಾಡುವವರು ಶುಚಿತ್ವ ಕಾಪಾಡಬೇಕು. ಆಹಾರ ವಿತರಣೆ ಮಾಡುವವರು ಕೈಗೆ ಗ್ಲೌಸ್ ಹಾಗೂ ಡ್ರೆಸ್ ಕೋಡ್ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು
ಸ್ವಚ್ಛತೆಯನ್ನು ಕಪಾಡಲು ಅವಶ್ಯಕವಾಗಿರುವ ಪೌರಕಾರ್ಮಿಕ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಿ. ಅಗತ್ಯವಿರುವ ಕಡೆ ಕಸದತೊಟ್ಟಿಗಳನ್ನು ಇಡಿ. ಸಾರ್ವಜನಿಕರಿಗೆ ಸ್ವಚ್ಚತೆ ಕಪಾಡುವಂತೆ ಪ್ರೇರೇಪಿಸಿ. ಪ್ರತಿ ಗಂಟೆಗೊಮ್ಮೆ ಸುತ್ತಮುತ್ತಲು ಶುಚಿಪಡಿಸುವ ಕೆಲಸವಾಗಬೇಕು ಎಂದರು.

ಸಾಂಸ್ಕೃತಿಕ ಸಮಿತಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ಮುಗಿದ ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಗೌರವಧನ ಮತ್ತು ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಅಪರ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

7 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

9 mins ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

11 mins ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

12 mins ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

15 mins ago

ಮರದ ಹಿಂದೆ ಮರೆಯಾದ ಸಿಗ್ನಲ್ ಲೈಟ್‌ಗಳು!

ಪ್ರಶಾಂತ್ ಎನ್ ಮೈಸೂರು: ಸುಗಮ ಸಂಚಾರ ಹಾಗೂ ಜನರ ಸುರಕ್ಷತೆಗಾಗಿ ನಗರದ ವಿವಿಧ ರಸ್ತೆ, ವೃತ್ತಗಳಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್…

21 mins ago