ಮಂಡ್ಯ

ಶ್ರೀರಂಗಪಟ್ಟಣ ದಸರಾ ಆಚರಣೆಗೆ ಸಕಲ ಸಿದ್ದತೆ: ಡಾ.ಕುಮಾರ

ಮಂಡ್ಯ: ಈ‌ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಪಾರಂಪರಿಕ ಹಾಗೂ ವಿಜೃಂಭಣೆಯಿಂದ  ಅಕ್ಟೋಬರ್ 4 -7 ರವರೆಗೆ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಅವರು ಇಂದು ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ನಡೆದ ದಸರಾ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ರೀತಿಯ ಅಡಚಣೆ ತೊಂದರೆ ಉಂಟಾಗದಂತೆ ನಿಗಾವಹಿಸಿ ಎಂದರು.

ಶ್ರೀರಂಗಪಟ್ಟಣ ದಸರಾ ಆಚರಣೆಯ ಸಕಲಸಿದ್ಧತೆಗಳ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ವಿಚಾರಗಳನ್ನು ಚರ್ಚಿಸಿ ಕಳೆದ ದಸರಾ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆ ತುಂಬಾ ಚಿಕ್ಕದಿದ್ದ ಕಾರಣ ಸ್ವಲ್ಪ ಪ್ರಮಾಣದ ತೊಂದರೆಗಳು ಆಗಿತ್ತು, ಆದ್ದರಿಂದ ಈ ಬಾರಿ ಕಾರ್ಯಕ್ರಮದ ವೇದಿಕೆಯನ್ನು ಅಗತ್ಯತೆಗೆ ತಕ್ಕಂತೆ ದೊಡ್ಡದಾಗಿ ನಿರ್ಮಾಣ ಮಾಡಬೇಕು‌ ಎಂದರು.

ಆಹ್ವಾನ ಪತ್ರಿಕೆ ವಿತರಣೆ
ದಸರಾ ಆಚರಣೆಯ ಆಹ್ವಾನ ಪತ್ರಿಕೆಗಳನ್ನು ಆದಷ್ಟು ಬೇಗ ಸಿದ್ದಪಡಿಸಬೇಕು. ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ಸಂಘ ಸಂಸ್ಥೆಗಳಿಗೆ ವಿತರಿಸಿ ಗೌರವಪೂರ್ವಕವಾಗಿ ಆಹ್ವಾನಿಸಬೇಕು. ಆಹ್ವಾನ ಪತ್ರಿಕೆಯೊಂದಿಗೆ ದಸರಾ ಕಾರ್ಯಕ್ರಮಗಳ ವಿವರ ನೀಡುವ 5 ದಸರಾ ಕರಪತ್ರಗಳನ್ನು ಸೇರಿಸಿ ಕೊಡಬೇಕು, ಆಹ್ವಾನ ಪತ್ರಿಕೆ ವಿತರಣೆಯಲ್ಲಿ ಯಾವುದೇ ದೂರು ಬರಬಾರದು ಎಂದರು.

ಕುಡಿಯುವ ನೀರಿನ ವ್ಯವಸ್ಥೆ
ಕುಡಿಯುವ ನೀರಿನ ವ್ಯವಸ್ಥೆ ಬಹಳ ಮುಖ್ಯವಾದ ಅಂಶ ಬಂದಂತಹ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ವೇಳೆಯಲ್ಲಿ ವೇದಿಕೆಯ ಬಳಿ ಹಾಗೂ ವೀಕ್ಷಕರ ಗ್ಯಾಲರಿಯ ಬಳಿ ಕುಡಿಯುವ ನೀರಿನ ಕ್ಯಾನ್ ಗಳ ವ್ಯವಸ್ಥೆ ಮಾಡಬೇಕು ಎಂದರು.

ಆರೋಗ್ಯ ತಪಾಸಣಾ ಶಿಬಿರ
ಆರೋಗ್ಯ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ ಎರಡು ಪಾಳಿಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿ ಎಂದರು.

ಆಹಾರ ಮೇಳ
ಆಹಾರ ಮೇಳದಲ್ಲಿ 40 ಮಳಿಗೆ (ಕೌಂಟರ್) ಗಳನ್ನು ತೆರೆಯಲಿದ್ದು, ಆಹಾರ ಮಳಿಗೆಗಳನ್ನು ಪರವಾನಗಿ ಹೊಂದಿರುವವರಿಗೆ ಮಾತ್ರ ನೀಡಬೇಕು. ಅನುಮತಿ ಪಡೆಯುವ ಎಲ್ಲಾ ಮಳಿಗೆಯ ತಯಾರಿಕೆಯ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ಹೇಳಿದರು.

ಆಹಾರ ಮೇಳದಲ್ಲಿ ಕೆಲಸಮಾಡುವವರು ಶುಚಿತ್ವ ಕಾಪಾಡಬೇಕು. ಆಹಾರ ವಿತರಣೆ ಮಾಡುವವರು ಕೈಗೆ ಗ್ಲೌಸ್ ಹಾಗೂ ಡ್ರೆಸ್ ಕೋಡ್ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು
ಸ್ವಚ್ಛತೆಯನ್ನು ಕಪಾಡಲು ಅವಶ್ಯಕವಾಗಿರುವ ಪೌರಕಾರ್ಮಿಕ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಿ. ಅಗತ್ಯವಿರುವ ಕಡೆ ಕಸದತೊಟ್ಟಿಗಳನ್ನು ಇಡಿ. ಸಾರ್ವಜನಿಕರಿಗೆ ಸ್ವಚ್ಚತೆ ಕಪಾಡುವಂತೆ ಪ್ರೇರೇಪಿಸಿ. ಪ್ರತಿ ಗಂಟೆಗೊಮ್ಮೆ ಸುತ್ತಮುತ್ತಲು ಶುಚಿಪಡಿಸುವ ಕೆಲಸವಾಗಬೇಕು ಎಂದರು.

ಸಾಂಸ್ಕೃತಿಕ ಸಮಿತಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ಮುಗಿದ ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಗೌರವಧನ ಮತ್ತು ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಅಪರ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

21 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

21 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

21 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

21 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

21 hours ago