Allegation of house construction
ಮಂಡ್ಯ: ರಸ್ತೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದ್ದು, ಒತ್ತುವರಿ ತೆರವಿಗೆ ಬಂದ ನಗರಸಭೆ ಅಧಿಕಾರಿಗಳೊಂದಿಗೆ ಮಾಲೀಕರು ವಾಗ್ವಾದಕ್ಕಿಳಿದ ಘಟನೆ ನಡೆದಿದೆ.
ಮಂಡ್ಯದ 21ನೇ ವಾರ್ಡ್ನ ಹಾಲಹಳ್ಳಿ 4ನೇ ಕ್ರಾಸ್ನಲ್ಲಿ ವಾಸವಿರುವ ನಗರಸಭೆ ಮಾಜಿ ಸದಸ್ಯ ಹಾಗೂ ಜಾ.ದಳ ಮುಖಂಡ ಶಂಕರ್ ಹಾಗೂ ಇತರೆ ನಾಲ್ವರು ರಸ್ತೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಮನೆ ಮಾಲೀಕರಿಗೆ ನೋಟಿಸ್ ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜೆಸಿಬಿಯೊಂದಿಗೆ ಒತ್ತುವರಿ ತೆರವಿಗೆ ಆಗಮಿಸಿದ ನಗರಸಭೆ ಅಧಿಕಾರಿಗಳೊಂದಿಗೆ ಮನೆ ಮಾಲೀಕರು ವಾಗ್ವಾದಕ್ಕಿಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮನೆ ಮಾಲೀಕರು ಕಾರ್ಯಾಚರಣೆಗೆ ಅಡ್ಡಿಪಡಿಸಿ ತೀವ್ರ ವಾಗ್ವಾದಕ್ಕೆ ಇಳಿದ ಪರಿಣಾಮ ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಮನೆ ಮಾಲೀಕರು, ನಾವು ಕಳೆದ 20 ವರ್ಷಗಳಿಂದಲೂ ಇಲ್ಲೇ ವಾಸವಾಗಿದ್ದೇವೆ. ನಾವು ಯಾವುದೇ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿಲ್ಲ. ಆದರೂ ನಗರಸಭೆ ಅಧಿಕಾರಿಗಳು ಒತ್ತುವರಿ ಎಂಬ ನೆಪಹೇಳಿ ಮನೆಯನ್ನು ಕೆಡವಲು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಮನೆ ತೆರವು ಮಾಡಲು ನಾವು ಬಿಡುವುದಿಲ್ಲ ಎಂದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…