ಮಂಡ್ಯ

ಮಂಡ್ಯ| ರಸ್ತೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿರುವ ಆರೋಪ

ಮಂಡ್ಯ: ರಸ್ತೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದ್ದು, ಒತ್ತುವರಿ ತೆರವಿಗೆ ಬಂದ ನಗರಸಭೆ ಅಧಿಕಾರಿಗಳೊಂದಿಗೆ ಮಾಲೀಕರು ವಾಗ್ವಾದಕ್ಕಿಳಿದ ಘಟನೆ ನಡೆದಿದೆ.

ಮಂಡ್ಯದ 21ನೇ ವಾರ್ಡ್‌ನ ಹಾಲಹಳ್ಳಿ 4ನೇ ಕ್ರಾಸ್‌ನಲ್ಲಿ ವಾಸವಿರುವ ನಗರಸಭೆ ಮಾಜಿ ಸದಸ್ಯ ಹಾಗೂ ಜಾ.ದಳ ಮುಖಂಡ ಶಂಕರ್ ಹಾಗೂ ಇತರೆ ನಾಲ್ವರು ರಸ್ತೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಮನೆ ಮಾಲೀಕರಿಗೆ ನೋಟಿಸ್‌ ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜೆಸಿಬಿಯೊಂದಿಗೆ ಒತ್ತುವರಿ ತೆರವಿಗೆ ಆಗಮಿಸಿದ ನಗರಸಭೆ ಅಧಿಕಾರಿಗಳೊಂದಿಗೆ ಮನೆ ಮಾಲೀಕರು ವಾಗ್ವಾದಕ್ಕಿಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೆ ಮಾಲೀಕರು ಕಾರ್ಯಾಚರಣೆಗೆ ಅಡ್ಡಿಪಡಿಸಿ ತೀವ್ರ ವಾಗ್ವಾದಕ್ಕೆ ಇಳಿದ ಪರಿಣಾಮ ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಮನೆ ಮಾಲೀಕರು, ನಾವು ಕಳೆದ 20 ವರ್ಷಗಳಿಂದಲೂ ಇಲ್ಲೇ ವಾಸವಾಗಿದ್ದೇವೆ. ನಾವು ಯಾವುದೇ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿಲ್ಲ. ಆದರೂ ನಗರಸಭೆ ಅಧಿಕಾರಿಗಳು ಒತ್ತುವರಿ ಎಂಬ ನೆಪಹೇಳಿ ಮನೆಯನ್ನು ಕೆಡವಲು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಮನೆ ತೆರವು ಮಾಡಲು ನಾವು ಬಿಡುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago