ಮಂಡ್ಯ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಮಂಡ್ಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹೆಚ್ ಆರ್ ಹರ್ಷ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಮಾರ್ಚ್ ೨೬ರಂದು ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ ಮುರಳೀಧರನ್ ಎಸ್.ತಳ್ಳಿಕೇರಿ ಅವರು ಅಧಿಕಾರಿ ಹರ್ಷ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕಳೆದ ಜ.೩೦ ರಂದು ಲೋಕಾಯುಕ್ತ ಪೊಲೀಸರು ಅಧಿಕಾರಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಯ ಪ್ರಾಥಮಿಕ ವರದಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಸಾಬೀತಾಗಿದೆ ಎಂದಿದ್ದಾರೆ.
ಅಧಿಕಾರಿ ಹೆಚ್ ಆರ್ ಹರ್ಷ ಅವರು ಪರಿಶೀಲನಾ ಅವಧಿಯಲ್ಲಿ ರೂ 1.40ಕೋಟಿ ಆದಾಯ, ರೂ ೧,25,50,336 ಖರ್ಚು,,, ರೂ 14,45,669 ಉಳಿತಾಯ ಹೊಂದಿರುತ್ತಾರೆ. ಆದರೆ ತನಿಖೆ ವೇಳೆ ರೂ 3,32,೮೭,೯೯೭ ಆಸ್ತಿಯಲ್ಲಿ ರೂ 3,18,38,333 ಅಂದರೆ ಆದಾಯಕ್ಕಿಂತ ಶೇ. ೨೨೭.೪೧ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಆರೋಪಿಸಿದ್ದಾರೆ.
ಲೋಕಯುಕ್ತ ತನಿಖೆ ಹಿನ್ನಲೆಯಲ್ಲಿ ಅಧಿಕಾರಿ ಹೆಚ್ ಆರ್ ಹರ್ಷ ಅವರನ್ನು ವಿಚಾರಣೆ ಬಾಕಿ ಇರಿಸಿ ಭ್ರಷ್ಟಚಾರ ಪ್ರತಿಬಂಧಕ ಕಾಯ್ದೆ 1988 ಕಲಂ ೧೩(1) (ಬಿ) ರಡಿ ಕ್ರಿಮಿನಲ್ ಮೊಕದ್ದಮೆ ಹಾಗೂ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೧೯೫೭ರ ನಿಯಮ ೧೦(೧) (ಎಎ) ರನ್ವಯ ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…
ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…
ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…
ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…