ಮಂಡ್ಯ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಮಂಡ್ಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹೆಚ್ ಆರ್ ಹರ್ಷ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಮಾರ್ಚ್ ೨೬ರಂದು ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ ಮುರಳೀಧರನ್ ಎಸ್.ತಳ್ಳಿಕೇರಿ ಅವರು ಅಧಿಕಾರಿ ಹರ್ಷ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕಳೆದ ಜ.೩೦ ರಂದು ಲೋಕಾಯುಕ್ತ ಪೊಲೀಸರು ಅಧಿಕಾರಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಯ ಪ್ರಾಥಮಿಕ ವರದಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಸಾಬೀತಾಗಿದೆ ಎಂದಿದ್ದಾರೆ.
ಅಧಿಕಾರಿ ಹೆಚ್ ಆರ್ ಹರ್ಷ ಅವರು ಪರಿಶೀಲನಾ ಅವಧಿಯಲ್ಲಿ ರೂ 1.40ಕೋಟಿ ಆದಾಯ, ರೂ ೧,25,50,336 ಖರ್ಚು,,, ರೂ 14,45,669 ಉಳಿತಾಯ ಹೊಂದಿರುತ್ತಾರೆ. ಆದರೆ ತನಿಖೆ ವೇಳೆ ರೂ 3,32,೮೭,೯೯೭ ಆಸ್ತಿಯಲ್ಲಿ ರೂ 3,18,38,333 ಅಂದರೆ ಆದಾಯಕ್ಕಿಂತ ಶೇ. ೨೨೭.೪೧ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಆರೋಪಿಸಿದ್ದಾರೆ.
ಲೋಕಯುಕ್ತ ತನಿಖೆ ಹಿನ್ನಲೆಯಲ್ಲಿ ಅಧಿಕಾರಿ ಹೆಚ್ ಆರ್ ಹರ್ಷ ಅವರನ್ನು ವಿಚಾರಣೆ ಬಾಕಿ ಇರಿಸಿ ಭ್ರಷ್ಟಚಾರ ಪ್ರತಿಬಂಧಕ ಕಾಯ್ದೆ 1988 ಕಲಂ ೧೩(1) (ಬಿ) ರಡಿ ಕ್ರಿಮಿನಲ್ ಮೊಕದ್ದಮೆ ಹಾಗೂ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೧೯೫೭ರ ನಿಯಮ ೧೦(೧) (ಎಎ) ರನ್ವಯ ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…