ಮಂಡ್ಯ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಮಂಡ್ಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹೆಚ್ ಆರ್ ಹರ್ಷ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಮಾರ್ಚ್ ೨೬ರಂದು ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ ಮುರಳೀಧರನ್ ಎಸ್.ತಳ್ಳಿಕೇರಿ ಅವರು ಅಧಿಕಾರಿ ಹರ್ಷ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕಳೆದ ಜ.೩೦ ರಂದು ಲೋಕಾಯುಕ್ತ ಪೊಲೀಸರು ಅಧಿಕಾರಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಯ ಪ್ರಾಥಮಿಕ ವರದಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಸಾಬೀತಾಗಿದೆ ಎಂದಿದ್ದಾರೆ.
ಅಧಿಕಾರಿ ಹೆಚ್ ಆರ್ ಹರ್ಷ ಅವರು ಪರಿಶೀಲನಾ ಅವಧಿಯಲ್ಲಿ ರೂ 1.40ಕೋಟಿ ಆದಾಯ, ರೂ ೧,25,50,336 ಖರ್ಚು,,, ರೂ 14,45,669 ಉಳಿತಾಯ ಹೊಂದಿರುತ್ತಾರೆ. ಆದರೆ ತನಿಖೆ ವೇಳೆ ರೂ 3,32,೮೭,೯೯೭ ಆಸ್ತಿಯಲ್ಲಿ ರೂ 3,18,38,333 ಅಂದರೆ ಆದಾಯಕ್ಕಿಂತ ಶೇ. ೨೨೭.೪೧ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಆರೋಪಿಸಿದ್ದಾರೆ.
ಲೋಕಯುಕ್ತ ತನಿಖೆ ಹಿನ್ನಲೆಯಲ್ಲಿ ಅಧಿಕಾರಿ ಹೆಚ್ ಆರ್ ಹರ್ಷ ಅವರನ್ನು ವಿಚಾರಣೆ ಬಾಕಿ ಇರಿಸಿ ಭ್ರಷ್ಟಚಾರ ಪ್ರತಿಬಂಧಕ ಕಾಯ್ದೆ 1988 ಕಲಂ ೧೩(1) (ಬಿ) ರಡಿ ಕ್ರಿಮಿನಲ್ ಮೊಕದ್ದಮೆ ಹಾಗೂ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೧೯೫೭ರ ನಿಯಮ ೧೦(೧) (ಎಎ) ರನ್ವಯ ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…