ಮಂಡ್ಯ

ಕೃಷಿ ನವೋದ್ಯಮಗಳ ಪ್ರೋತ್ಸಾಹಕ್ಕೆ ಸದಾ ಸಿದ್ದ‌: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌.

ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.

ಸಭೆಯಲ್ಲಿ ಕೃಷಿ ನವೋದ್ಯಮಗಳ ಸ್ಥಿತಿಗತಿ, ಅವುಗಳು ಎದುರಿಸುತ್ತಿರುವ ಸವಾಲುಗಳು,
ಸಿರಿಧಾನ್ಯ ಆಧಾರಿತ ಉದ್ಯಮಗಳನ್ನು ಬಲ ಪಡಿಸಲು ಅಗತ್ಯ ಇರುವ ಸರ್ಕಾರದ ನೆರವಿನ ಕುರಿತು ಕೃಷಿ ಸಚಿವರು ಸ್ಟಾರ್ಟಪ್ ಉದ್ಯಮಿಗಳ ಅಭಿಪ್ರಾಯ ಆಲಿಸಿದರು.

ಸಿರಿ ಧಾನ್ಯ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕೊರತೆ ಇದೆ. ಹಾಗಾಗಿ ಪ್ರೋತ್ಸಾಹ ಧನ ಯೋಜನೆ ಮುಂದುವರೆಸುವ ಜೊತೆಗೆ ಉತ್ಪಾದನೆಯನ್ನು 30 ಸಾವಿರದಿಂದ 50 ಸಾವಿರ ಹೆಕ್ಟೇರ್ ಗೆ ಏರಿಕೆ ಮಾಡಲು ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚಿಸಿದರು.

ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಿ.
ರಾಜ್ಯಾದ್ಯಂತ ಇರುವ ಎಫ್.ಪಿ.ಓ ಗಳ ಜೊತೆ ಉದ್ದಿಮೆದರರ ಸಂಪರ್ಕ ಕಲ್ಪಿಸಿ ಎಂದು ಅವರು ಹೇಳಿದರು.

ಪ್ರತಿ ಜಿಲ್ಲೆಯಲ್ಲೂ 2 ದಿನಗಳ ಸಿರಿಧಾನ್ಯ ಮೇಳ ಏರ್ಪಡಿಸುವ ಜೊತೆಗೆ ವಿದೇಶದಲ್ಲಿ ನಡೆಯುವ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳಲ್ಲಿ ರಾಜ್ಯದಿಂದ ಮಳಿಗೆ ಹಾಕಲು ಸಹ ನೆರವು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು .

ಪ್ರಸಕ್ತ ಮಿಲೆಟ್ ಪೌಡರ್ ಗಳಿಗೆ ಜಿ.ಎಸ್.ಟಿ ಯನ್ನು ಶೇ 18 ರಿಂದ 5 ಕ್ಕೆ ಇಳಿಕೆ ಮಾಡಿರುವಂತೆ ಇದನ್ನು ಇತರ ಮೌಲ್ಯವರ್ಧಿತ ಕೃಷಿ ಆಹಾರ ಉತ್ಪನ್ನಗಳಿಗೂ ವಿಸ್ತರಿಸಬೇಕು ಎಂದು ನವೋದ್ಯಮಿಗಳು ಮನವಿ ಮಾಡಿದ್ದು ಈ ಬಗ್ಗೆ ಕೇಂದ್ರ ಸರ್ಕಾರರಕ್ಕೆ ಪೂರಕ ಪ್ರಸ್ತಾವನೆ ಕಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಿಲೆಟ್ ಆಹಾರ ಉತ್ಪಾದಕರಿಗೆ ತಂತ್ರಜ್ಞಾನ ವಿಸ್ತರಣೆ ಜೊತೆಗೆ ಧೀರ್ಘಾವದಿಗೆ ಆಹಾರ ಪದಾರ್ಥ ಸಂಸ್ಕರಣೆ ಗೆ ಸಿ.ಫ್.ಟಿ.ಆರ್.ಐ ಮೂಲಕ ನೆರವು ಒದಗಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದೂ ಅವರು ಭರವಸೆ ನೀಡಿದರು.

ಕೃಷಿ ಇಲಾಖೆ ಮೂಲಕ ಶೀಘ್ರವೇ ಕೃಷಿ ನವೋದ್ಯಮಗಳು ಹಾಗೂ ಉತ್ಪಾದಕರು, ಪೂರೈಕೆದಾರರ ಸಂಪರ್ಕ ಬೆಸೆಯುವ ಕೆಲಸ ಮಾಡಲಾಗುವುದು ಜೊತೆಗೆ ಮಾರುಕಟ್ಟೆ ಉತ್ತೇಜನಕ್ಕೆ ಸರ್ಕಾರದ ನೆರವು ಸದಾ ಸಿಗಲಿದೆ. ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ಕೃಷಿ ಸಚಿವರು ತಿಳಿಸಿದರು‌

ಇದೇ ವೇಳೆ ವಿವಿಧ ಆಧಾರಿತ ಸಿರಿಧಾನ್ಯ ಆಹಾರ ಪದಾರ್ಥಗಳ ಉತ್ಪಾದಕರು ಉದ್ಯಮದ ಯಶಸ್ಸು, ವ್ಯಾಪ್ತಿ ಬಗ್ಗೆ ವಿವರಿಸಿ, ನವೋದ್ಯಮಕ್ಕೆ ಸಹಕಾರ ನೀಡಿದ ಕೃಷಿ ಸಚಿವರು ಸರ್ಕಾರ ನೆರವಿಗೆ ಧನ್ಯವಾದ ಸಮರ್ಪಿಸಿದರು.

ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ , ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಆಹಾರ ಸಂಸ್ಕರಣೆ ಮತ್ತು‌ ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಸಹ ಅಮೂಲ್ಯ ಸಲಹೆಗಳನ್ನು ನೀಡಿದರು. ಕೃಷಿ ಆಯುಕ್ತರಾದ ವೈ.ಎಸ್ .ಪಾಟೀಲ್, ನೀರ್ದೇಶಕರಾದ ಡಾ. ಪುತ್ರ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರಾದ ಬಂಥನಾಳ್ ಮತ್ತಿತರ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

2 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

5 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

5 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

5 hours ago