ಮಂಡ್ಯ

ವಕ್ಫ್‌ ಕಾಯ್ದೆ ತಿದ್ದುಪಡಿ ಮಂಡನೆ : ರೈತರಿಗೆ ದೊರೆತ ಜಯ

ಮಂಡ್ಯ: ರೈತ ವಿರೋಧಿ, ಸಂವಿಧಾನ ವಿರೋಧಿ ವಕ್ಫ್ ಕಾಯಿದೆಯಿಂದ ದೇಶದ ಜನರನ್ನು ರಕ್ಷಿಸಲು ವಕ್ಫ್ ಕಾಯ್ದೆಗೆ ಬಿಲ್ಲನ್ನು ಕೇಂದ್ರ ಸರ್ಕಾರ ಸಂಸತ್ತಿನ ಮಂಡಿಸಿರುವುದು ದೇಶದ ರೈತರಿಗೆ ದೊರೆತ ಜಯವಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ರಮೇಶ್ ರಾಜು ಸಂತಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ರೈತರು ಹಾಗೂ ಸಾರ್ವಜನಿಕರನ್ನು ಪೆಡಂಭೂತದಂತೆ ಕಾಡುತ್ತಿದ್ದ ವಕ್ಫ್‌ಕಾಯ್ದೆಗೆ ತಿದ್ದುಪಡಿ ತಂದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಸದರಿ ಕಾಯ್ದೆಗೆ ತಿದ್ದುಪಡಿ ತರಲು ಬಿಲ್ಲನ್ನು ಸಂಸತ್ತಿನಲ್ಲಿ ಮಂಡಿಸಿದಾಗ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ವಿರೋಧಿಸಿದ್ದು, ಈ ಪಕ್ಷಗಳು ರೈತರ ಪಕ್ಷವಾಗಿರಲು ಸಾಧ್ಯವೇ ಇಲ್ಲ ಎಂದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಕ್ಫ್ ಕಾಯ್ದೆಗೆ ಶಕ್ತಿ ತುಂಬಿಸುವ ನಿಟ್ಟಿನಲ್ಲಿ ಮೂರ್‍ನಾಲ್ಕು ಬಾರಿ ತಿದ್ದುಪಡಿ ತಂದು ಓಟ್ ಬ್ಯಾಂಕ್‌ಗಾಗಿ ಒಂದು ಕೋಮಿಗೆ ದೇಶವನ್ನು ಅಡವಿಟ್ಟು ರೈತರಿಗೆ ದ್ರೋಹ ಬಗೆದಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವೂ ವಕ್ಫ್ ಕಾಯ್ದೆಗೆ ತಿದ್ದುಪಡಿ ತರದಂತೆ ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಮುಂದಾಗಿತ್ತು. ರಾಜ್ಯ ಸರ್ಕಾರವೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಆದ್ದರಿಂದ ರೈತರು ಜಾಗೃತಗೊಳ್ಳಬೇಕಿದ್ದು, ಇಲ್ಲದಿದ್ದರೆ ರಾಜ್ಯದ ರೈತರಿಗೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರವು ಕಳೆದ ೨೦ ತಿಂಗಳಿನಲ್ಲಿ ಗ್ರಾಹಕರಿಗೆ ಹಾಲಿನ ದರ ೯ ರೂ ಹೆಚ್ಚಿಸಿದ್ದು, ರೈತರಿಗೆ ೪ ರೂ. ಕಡಿತಗೊಳಿಸಿ, ಮತ್ತೆ ೪ ರೂ ಹೆಚ್ಚಳ ಮಾಡಿ, ರೈತರಿಗೆ ನೀಡುವುದಾಗಿ ಹೇಳುತ್ತಿದೆ. ರೈತರಿಂದ ಹಾಲನ್ನು ಖರೀದಿಸಿ ಗ್ರಾಹಕರಿಗೆ ತಲುಪಿಸಲು ಆಪರೇಟಿಂಗ್ ಸಿಸ್ಟಮ್‌ನ ವೆಚ್ಚ ಶೇ ೧೦ರಿಂದ ೨೦ ಮಾತ್ರ ತಗುಲಲಿದ್ದು, ಶೇ.೬೫ ರಷ್ಟು ಇಟ್ಟು ರೈತರಿಗೆ ಹಾಲಿನ ದರ ಏರಿಸದೇ ಅನ್ಯಾಯವೆಸಗುತ್ತಿದೆ ಎಂದು ಕಿಡಿಕಾರಿದರು.

ಶಾಸಕರು ಹಾಗೂ ಸಚಿವರ ವೇತನ ಶೇ.೫೦ ರಷ್ಟು ಏರಿಸಿಕೊಂಡಿರುವ ಸರ್ಕಾರ ರೈತರ ಕಬ್ಬಿನ ಎಫ್‌ಆರ್‌ಪಿ ದರ ಏರಿಕೆ ಸಂಬಂಧವಾಗಲೀ, ರೈತರ ಸಮಸ್ಯೆಗಳನ್ನು ಬಗೆರಿಸುವ ಸಂಬಂಧವಾಗಲೀ ಚರ್ಚಿಸದೇ ಇದ್ದು, ರಾಜ್ಯ ಸರ್ಕಾರವೂ ರೈತರ ಪರವಿಲ್ಲ ಎಂದು ದೂಡಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅಪ್ಪಾಜಿ ಹಳೆಬುದನೂರು, ಶ್ರೀಧರ್, ರುದ್ರಪ್ಪ, ನಾರಾಯಣ ಸ್ವಾಮಿ, ನರೇಶ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago