ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ. ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಐದು ಲಕ್ಷ ರೂ.ಗಳನ್ನು ಸಮರ್ಪಣೆ ಮಾಡಿದ್ದಾರೆ.
ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ.
ಇದನ್ನೂ ಓದಿ:-ಮನ್ ಕಿ ಬಾತ್ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ
ಅಮೆರಿಕಾದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರು. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು. “ಕಾವೇರಿ ಆರತಿ”ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು. ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು. ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ.
ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ ಅನಿವಾಸಿ ಭಾರತೀಯೆ ಜ್ಯೋತಿ ವಿಕಾಸ್ ಹೇಳಿದ್ದಾರೆ. ಜ್ಯೋತಿ ವಿಕಾಸ ಅವರು 5 ಲಕ್ಷ ರೂ ಹಣವನ್ನು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು 5 ಲಕ್ಷ ರೂ ಕಳುಹಿಸಿಕೊಟ್ಟಿರುತ್ತಾರೆ. ಈ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಎಸ್ಸಿ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…
ತಿ.ನರಸೀಪುರ: ಪಟ್ಟಣದ ಕೆಎಸ್ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗ…
ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…