ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ. ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಐದು ಲಕ್ಷ ರೂ.ಗಳನ್ನು ಸಮರ್ಪಣೆ ಮಾಡಿದ್ದಾರೆ.
ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ.
ಇದನ್ನೂ ಓದಿ:-ಮನ್ ಕಿ ಬಾತ್ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ
ಅಮೆರಿಕಾದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರು. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು. “ಕಾವೇರಿ ಆರತಿ”ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು. ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು. ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ.
ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ ಅನಿವಾಸಿ ಭಾರತೀಯೆ ಜ್ಯೋತಿ ವಿಕಾಸ್ ಹೇಳಿದ್ದಾರೆ. ಜ್ಯೋತಿ ವಿಕಾಸ ಅವರು 5 ಲಕ್ಷ ರೂ ಹಣವನ್ನು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು 5 ಲಕ್ಷ ರೂ ಕಳುಹಿಸಿಕೊಟ್ಟಿರುತ್ತಾರೆ. ಈ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಎಸ್ಸಿ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…