ಮಂಡ್ಯ

ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ : ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ

ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ. ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಐದು ಲಕ್ಷ ರೂ.ಗಳನ್ನು ಸಮರ್ಪಣೆ ಮಾಡಿದ್ದಾರೆ.

ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ.

ಇದನ್ನೂ ಓದಿ:-ಮನ್‌ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ

ಅಮೆರಿಕಾದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರು. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು. “ಕಾವೇರಿ ಆರತಿ”ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು. ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು. ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ.

ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ ಅನಿವಾಸಿ ಭಾರತೀಯೆ ಜ್ಯೋತಿ ವಿಕಾಸ್ ಹೇಳಿದ್ದಾರೆ. ಜ್ಯೋತಿ ವಿಕಾಸ ಅವರು 5 ಲಕ್ಷ ರೂ ಹಣವನ್ನು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು 5 ಲಕ್ಷ ರೂ ಕಳುಹಿಸಿಕೊಟ್ಟಿರುತ್ತಾರೆ. ಈ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಎಸ್‌ಸಿ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago