ಮಂಡ್ಯ

ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ : ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ

ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ. ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಐದು ಲಕ್ಷ ರೂ.ಗಳನ್ನು ಸಮರ್ಪಣೆ ಮಾಡಿದ್ದಾರೆ.

ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ.

ಇದನ್ನೂ ಓದಿ:-ಮನ್‌ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ

ಅಮೆರಿಕಾದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರು. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು. “ಕಾವೇರಿ ಆರತಿ”ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು. ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು. ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ.

ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ ಅನಿವಾಸಿ ಭಾರತೀಯೆ ಜ್ಯೋತಿ ವಿಕಾಸ್ ಹೇಳಿದ್ದಾರೆ. ಜ್ಯೋತಿ ವಿಕಾಸ ಅವರು 5 ಲಕ್ಷ ರೂ ಹಣವನ್ನು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು 5 ಲಕ್ಷ ರೂ ಕಳುಹಿಸಿಕೊಟ್ಟಿರುತ್ತಾರೆ. ಈ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಎಸ್‌ಸಿ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

48 mins ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

5 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

21 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

21 hours ago