ಜಿಲ್ಲೆಗಳು

ಮಂಡ್ಯ : ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ

ಮಂಡ್ಯ: ಟ್ಯೂಶನ್‌ಗೆ ತೆರಳಿದ್ದ ವಿದ್ಯಾರ್ಥಿನಿ ನೀರಿನ ಸಂಪ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.
ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ ಟ್ಯೂಶನ್‌ಗಾಗಿ ಮನೆಯಿ೦ದ ಹೋಗಿದ್ದ ವಿದ್ಯಾರ್ಥಿನಿ ಬಳಿಕ ಮನೆಗೆ ವಾಪಸ್​ ಬಾರದ ಹಿನ್ನೆಲೆ ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ಪೋಷಕರು ವಿಚಾರಿಸಿದ್ದಾರೆ. ಎಲ್ಲಿಯೂ ಬಾಲಕಿ ಪತ್ತೆಯಾಗಿಲ್ಲ. ಬಳಿಕ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿ ಪರಿಶೀಲಿಸಿದಾಗ ನೀರಿನ ಸಂಪ್ ಒಳಗೆ ಬಾಲಕಿಯ ಶವ ಪತ್ತೆಯಾಗಿದೆ.
ಇನ್ನು, ವಿದ್ಯಾರ್ಥಿನಿಯ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್​ಪಿ ಎನ್.ನವೀನ್‌ ಕುಮಾರ್, ಸಿಪಿಐ ಎ.ಕೆ. ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ  ಕುರಿತು ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

4 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

4 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

5 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

14 hours ago