ಮಂಡ್ಯ

ಅಂಗನವಾಡಿ ಕೇಂದ್ರಗಳು ಅಭಿವೃದ್ಧಿ ಹೊಂದಲಿ: ಆನಂದ್

ಮಂಡ್ಯ: ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಲು ಪೂರಕವಾದ ವಾತವರಣ ಸೃಷ್ಠಿಸಬೇಕು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ಹೇಳಿದರು.

ಶನಿವಾರ(ಜು.6) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಖಾಸಗಿ ಪ್ಲೇ ಹೋಂ, ಪೂರ್ವ ಪ್ರಾಥಮಿಕ ಶಾಲೆಗಳಿಗೆ ಹೋಲಿಕೆ ಮಾಡಿದರೆ ಸರ್ಕಾರಿ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಜಿಲ್ಲೆಯಲ್ಲಿ ಹೆಚ್ಚಾಗಿ ಕೃಷಿಕರು ಇರುವುದರಿಂದ ಮಕ್ಕಳನ್ನು ಸರ್ಕಾರಿ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸುತ್ತಾರೆ‌. ಹೀಗಾಗಿ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಬೇಕು ಮಕ್ಕಳಿಗೆ ಪೌಷ್ಟಿಕ ಆಹಾರ, ಸ್ವಚ್ಛವಾದ ವಾತವರಣವನ್ನು ಸೃಷ್ಟಿಸಬೇಕು ಸರ್ಕಾರಿ ಅಂಗನವಾಡಿ ಕೇಂದ್ರಗಳು ಯಾವುದರಲ್ಲು ಕಮ್ಮಿ ಇಲ್ಲ ಎಂಬಂತೆ ಇರಬೇಕು ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 2558 ಅಂಗನವಾಡಿಗಳು ಇದ್ದು ಅದರಲ್ಲಿ ಸ್ವಂತ ಕಟ್ಟಡ 1769, ಪಂಚಾಯತಿ ಕಟ್ಟಡ 31, ಸಮುದಾಯ ಕಟ್ಟಡ 66, ಬಾಡಿಗೆ ಕಟ್ಟಡ 222, ಶಾಲಾ ಕಟ್ಟಡ 311, ಬಾಡಿಗೆ ರಹಿತ ಕಟ್ಟಡಗಳು 157 ಕಾರ್ಯನಿರ್ವಹಿಸುತ್ತಿರುತ್ತದೆ ಎಂದರು.

ಜೂನ್ 2024 ರಿಂದ ಮಂಡ್ಯ ಜಿಲ್ಲೆಯ ಸುಮಾರು 20 ಅಂಗನವಾಡಿಗಳಿಗೆ ಭೇಟಿ ನೀಡಿದ್ದು, ಅವುಗಳಲ್ಲಿ ಕೆಲವೊಂದು ಸ್ವಂತ ಕಟ್ಟಡ, ಬಾಡಿಗೆ ಕಟ್ಟಡ ಹಾಗೂ ಕೆಲವೊಂದು ಸರ್ಕಾರಿ ಶಾಲಾ ಕಾಂಪೌಂಡ್ ನಲ್ಲಿ ನಡೆಯುತ್ತಿದೆ.

ಕೆಲವು ಅಂಗನವಾಡಿಗಳಲ್ಲಿ ಸರ್ಕಾರದಿಂದ ನೀಡುವ ಆಹಾರ ಪದಾರ್ಥಗಳನ್ನು ಸಂಗ್ರಹಿಸಿಡಲು ಸುಸಜ್ಜಿತ ವ್ಯವಸ್ಥೆ ಇಲ್ಲದಿರುವುದು ಕಂಡು ಬಂದಿದ್ದು, ಹಾಗೂ ಅಡುಗೆ ಮಾಡಲು ಉಪಯೇಗಿಸುವ ಪಾತ್ರೆಗಳು ಹಳೆದಾಗಿದ್ದು ಅವುಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲಾಗಿದೆ. ಹಳೆಯದಾದ ಶೌಚಾಲಯ, ದುರಸ್ತಿ ಕೆಲಸಗಳು ಅಂಗನವಾಡಿಯ ಸುತ್ತಮುತ್ತಲು ಶುಚಿತ್ವ ಕಾಪಾಡಿಕೊಳ್ಳಲು ಹಾಗೂ ಖಾಲಿ ಇರುವ ಕಡೆ ಅಂಗನವಾಡಿ ಸಹಾಯಕಿಯರ ನೇಮಕ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ತಿಳಿಸಲಾಗಿದೆ ಎಂದರು.

ಮಕ್ಕಳಿಗೆ ಅನ್ನ ಬೇಳೆ ಸಾಂಬಾರು, ಮಿಲೆಟ್ ಲಾಡು, ಗೋಧಿ ನುಚ್ಚಿನ ಉಪ್ಪಿಟ್ಟು ಹಾಗೂ ಮೊಟ್ಟೆ ನೀಡುತ್ತಿದ್ದಾರೆ. ಬಾಣಂತಿಯರಿಗೂ ಸಹ ಮೊಟ್ಟೆ ನೀಡಲಾಗುತ್ತಿದೆ. ಅಂಗನವಾಡಿಗಳ ಮೂಲ ಭೂತ ಸೌಕರ್ಯಗಳನ್ನು ಹಾಗೂ ಶುಚಿತ್ವವನ್ನು ಕಾಪಾಡಿಕೊಂಡರೆ ಹೆಚ್ಚು ಮಕ್ಕಳನ್ನು ಅಂಗನವಾಡಿಗೆ ಸೇರಿಸಲು ಪೋಷಕರು ಆಸಕ್ತಿ ತೋರುವ ಸಾಧ್ಯತೆಯಿರುತ್ತದೆ ಎಂದರು.

ನಿರ್ಮಾಣ ಹಂತದಲ್ಲಿರುವ ಅಂಗನವಾಡಿಗಳ ಕಾಮಗಾರಿಯನ್ನು ವಿಳಂಬ ಮಾಡದೆ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

10 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

10 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

14 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

14 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

14 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

14 hours ago